AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ದೆಹಲಿ ಭೇಟಿ ಬಗ್ಗೆ ಡಿಕೆಶಿ ಅಚ್ಚರಿಯ ಹೇಳಿಕೆ

ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ದೆಹಲಿ ಭೇಟಿ ಬಗ್ಗೆ ಡಿಕೆಶಿ ಅಚ್ಚರಿಯ ಹೇಳಿಕೆ

Ganapathi Sharma
|

Updated on: Dec 20, 2025 | 1:45 PM

Share

ಸಿಎಂ ಸಿದ್ದರಾಮಯ್ಯ ಅಧಿಕಾರ ಹಂಚಿಕೆ ಮಾತನ್ನು ವಿಧಾನಸಭೆಯೊಳಗೆ ನಿಂತು ಶುಕ್ರವಾರ ಅಲ್ಲಗಳೆದಿದ್ದರು. ಎರಡೂವರೆ ವರ್ಷದ ತೀರ್ಮಾನ ಆಗಿಲ್ಲ. ಐದು ವರ್ಷವೂ ನಾನೇ ಸಿಎಂ ಎಂದಿದ್ದರು. ಈ ಬೆನ್ನಲ್ಲೇ ಹೈಕಮಾಂಡ್ ಕಡೆಗೆ ಕಾಂಗ್ರೆಸ್​​​ನ ಗಮನ ಹೋಗಿದೆ. ಈ ನಡುವೆ ಡಿಕೆಶಿ ದೆಹಲಿಗೆ ಪ್ರಯಾಣ ಬೆಳೆಸಲು ಸಜ್ಜಾಗಿದ್ದಾರೆ.

ಬೆಂಗಳೂರು, ಡಿಸೆಂಬರ್ 20: ಹೈಕಮಾಂಡ್ ನನ್ನ ಪರವಾಗಿದೆ. ಎರಡೂವರೆ ವರ್ಷದ ಅಗ್ರಿಮೆಂಟೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಶುಕ್ರವಾರ ಹೇಳಿದ್ದರು. ಈ ಮಾತು ಸದ್ಯ ಅವರ ಬೆಂಬಲಿಗರಲ್ಲಿ ವಿಶ್ವಾಸ ಹೆಚ್ಚಿಸಿದೆ. ಜೊತೆಜೊತೆಗೆ ಡಿಸಿಎಂ ಡಿಕೆ ಶಿವಕುಮಾರ್ ಬಣ ಹಾಗೂ ಹೈಕಮಾಂಡ್​​ಗೂ ಸಂದೇಶ ರವಾನೆ ಆಗಿದೆ. ಈ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳುತ್ತಿರುವುದು ಕುತೂಹಲ ಮೂಡುವಂತೆ ಮಾಡಿದೆ. ದೆಹಲಿಗೆ ತೆರಳುವ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಹೈಕಮಾಂಡ್ ನಮ್ಮಿಬ್ಬರಿಗೂ ಏನೋ ಹೇಳಿದೆ. ಹೈಕಮಾಂಡ್ ನಾಯಕರು ಕರೆದಾಗ ಇಬ್ಬರೂ ಒಟ್ಟಿಗೆ ದೆಹಲಿಗೆ ಹೋಗುತ್ತೇವೆ ಎಂದಿದ್ದಾರೆ. ಆದರೆ ವರಿಷ್ಠರು ಹೇಳಿದ್ಯಾವ ವಿಚಾರ ಎಂಬ ಬಗ್ಗೆ ಗುಟ್ಟು ಮಾತ್ರ ಬಿಟ್ಟುಕೊಟ್ಟಿಲ್ಲ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ