AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru; ಕಾಂಗ್ರೆಸ್ ನಾಯಕರ ಪಂಚೆ ಬಗ್ಗೆ ಮಾತಾಡೋದು ಬಿಟ್ಟು ಸಿಟಿ ರವಿ ಮೊದ್ಲು ತಮ್ಮ ಪಂಚೆ ಸರಿಮಾಡಿಕೊಳ್ಳಲಿ: ಎನ್ ಚಲುವರಾಯಸ್ವಾಮಿ

Mysuru; ಕಾಂಗ್ರೆಸ್ ನಾಯಕರ ಪಂಚೆ ಬಗ್ಗೆ ಮಾತಾಡೋದು ಬಿಟ್ಟು ಸಿಟಿ ರವಿ ಮೊದ್ಲು ತಮ್ಮ ಪಂಚೆ ಸರಿಮಾಡಿಕೊಳ್ಳಲಿ: ಎನ್ ಚಲುವರಾಯಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Jul 01, 2023 | 2:33 PM

Share

ವಿಧಾನ ಸಭಾ ಚುನಾವಣೆಯಲ್ಲಿ ಕೇವಲ 66 ಸೀಟು ಗೆದ್ದು ಬಿಜೆಪಿ ನಾಯಕರು ತಮ್ಮ ತಮ್ಮಲ್ಲಿ ಜಗಳವಾಡುತ್ತಿದ್ದಾರೆ ಎಂದು ಸಚಿವ ಹೇಳಿದರು.

ಮೈಸೂರು: ಕೃಷಿ ಸಚಿವ ಎನ್ ಚಲುವರಾಯಸ್ವಾಮಿ (N Cheluvarayaswamy) ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾ ಮಾಜಿ ಶಾಸಕ ಸಿಟಿ ರವಿ (CT Ravi) ಮಾಡಿದ ಪಂಚೆ ಕಾಮೆಂಟ್ ಗೆ ಖಡಕ್ ಉತ್ತರ ನೀಡಿದರು. ಕಾಂಗ್ರೆಸ್ ಪಕ್ಷದ ಪಂಚೆ ವಿಷಯ ಹಾಗಿರಲಿ, ಅವರು ಮೊದಲು ತಮ್ಮ ಪಂಚೆ ಸರಿಮಾಡಿಕೊಳ್ಳಲಿ, ಹೀಗೆ ಮಾತಾಡಿದ್ದಕ್ಕೆ ಜನ ಚೆನ್ನಾಗಿ ಪಾಠ ಕಲಿಸಿದ್ದಾರೆ ಆದರೂ ಬುದ್ಧಿ ಬಂದಿಲ್ಲ ಎಂದು ಸಚಿವ ಲೇವಡಿ ಮಾಡಿದರು. ವಿಧಾನ ಸಭಾ ಚುನಾವಣೆಯಲ್ಲಿ (Assembly polls) ಕೇವಲ 66 ಸೀಟು ಗೆದ್ದು ಬಿಜೆಪಿ ನಾಯಕರು ತಮ್ಮ ತಮ್ಮಲ್ಲಿ ಜಗಳವಾಡುತ್ತಿದ್ದಾರೆ. ಒಬ್ಬೊಬ್ಬ ನಾಯಕ ಒಂದೊಂದು ರೀತಿಯ ಹೇಳಿಕೆ ನೀಡುತ್ತಾನೆ, ಕಾಂಗ್ರೆಸ್ ಪಕ್ಷವನ್ನು ಅವರು ನೋಡಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅದ್ಭುತವಾದ ಸಮನ್ವತೆಯೊಂದಿಗೆ ಸರ್ಕಾರ ಮತ್ತು ಆಡಳಿತ ನಡೆಸಿಕೊಂಡು ಹೋಗುತ್ತಿದ್ದಾರೆ ಎಂದು ಚಲುವರಾಯಸ್ವಾಮಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.