Cyclone Beeper Joy effect: ರಾಷ್ಟ್ರೀಯ ಹೆದ್ದಾರಿ 66 ಹಾದುಹೋಗುವ ಉತ್ತರ ಕನ್ನಡ ಜಿಲ್ಲೆಯ ಗುಡ್ಡಗಾಡು ಪ್ರದೇಶದಲ್ಲಿ ಬೆಟ್ಟ ಕುಸಿಯುವ ಆತಂಕ

Updated on: Jun 12, 2023 | 12:07 PM

ಕಾಮಗಾರಿ ನಡೆಸುತ್ತಿರುವ ಐಆರ್ ಬಿ ಸಂಸ್ಥೆಯೊಂದಿಗೆ ಸಭೆ ನಡೆಸಿ ಪರಿಹಾರ ಕಂಡುಕೊಳ್ಳುವುದಾಗಿ ಮಂಕಾಳೆ ವೈದ್ಯ ಹೇಳಿದ್ದಾರೆ.

ಉತ್ತರ ಕನ್ನಡ: ಬೀಪರ್ ಜಾಯ್ ಚಂಡಮಾರುತದ (Beepr Joy Cyclone) ಪ್ರಭಾವಕ್ಕೆ ರಾಜ್ಯದ ಕರಾವಳಿ ಭಾಗ (coastal region) ಸಿಲುಕಿದ್ದು ಕಳೆದ 3-4 ದಿನಗಳಿಂದ ಜೋರು ಮಳೆಯಾಗುತ್ತಿದೆ. ಮಳೆ ಮತ್ತು ಚಂಡಮಾರುತದಿಂದಾಗಿ ರಾಷ್ಟ್ರೀಯ ಹೆದ್ದಾರಿ 66 ಹಾದುಹೋಗುವ ಜಿಲ್ಲೆಯ ಗುಡ್ಡಗಾಡು ಪ್ರದೇಶದಲ್ಲಿ ಗುಡ್ಡ ಕುಸಿಯುವ ಆತಂಕ ಎದುರಾಗಿದೆ. ಅಸಲಿಗೆ ಈ ಹೆದ್ದಾರಿಯ ಅಗಲೀಕರಣಕ್ಕಾಗಿ ಹಲವಾರು ವರ್ಷಗಳಿಂದ ಬೆಟ್ಟಪ್ರದೇಶಗಳನ್ನು ಅವೈಜ್ಞಾನಿಕ ರೀತಿಯಲ್ಲಿ ಕೊರೆಯಲಾಗುತ್ತಿದೆ ಮತ್ತು ಕಾಮಗಾರಿ ಕೂಡ ಪೂರ್ತಿಗೊಂಡಿಲ್ಲ. ಗುಡ್ಡಗಳ ಕೊರೆಯುವಿಕೆಯಿಂದಾಗಿ ಹಲವು ಭಾಗಗಲ್ಲಿ ಅವರು ಶಿಥಿಲಗೊಂಡಿದ್ದು ಬಿರುಗಾಳಿ ಮತ್ತು ಮಳೆಗೆ ಕುಸಿಯವ ಅಪಾಯ ಸೃಷ್ಟಿಯಾಗಿದೆ. ಜಿಲ್ಲೆಯ ಉಸ್ತುವಾರಿ ಸಚಿವ ಮಂಕಾಳೆ ವೈದ್ಯ (Mankale Vaidya) ಅವರ ಗಮನಕ್ಕೆ ವಿಷಯ ಬಂದಿದ್ದು ಕಾಮಗಾರಿ ನಡೆಸುತ್ತಿರುವ ಐಆರ್ ಬಿ ಸಂಸ್ಥೆಯೊಂದಿಗೆ ಸಭೆ ನಡೆಸಿ ಪರಿಹಾರ ಕಂಡುಕೊಳ್ಳುವುದಾಗಿ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More