ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿದು ಟ್ರಾಫಿಕ್ ಜಾಮ್ ಉಂಟಾಗಿದ್ದ ಘಟನೆ ತಡ ರಾತ್ರಿ ಸಂಭವಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ 10ನೇ ತಿರುವಿನಲ್ಲಿ ಗುಡ್ಡ ಕುಸಿದಿದ್ದು ಚಾರ್ಮಾಡಿ ಘಾಟ್ನಿಂದ ಕೊಟ್ಟಿಗೆಹಾರದವರೆಗೂ ವಾಹನಗಳು ನಿಂತಲ್ಲೇ ನಿಂತಿದ್ದವು. ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಯ್ತು. ಮಂಗಳೂರಿಗೆ ತೆರಳುವವರನ್ನು ಪೊಲೀಸರು ಕೊಟ್ಟಿಗೆಹಾರದಲ್ಲೇ ತಡೆದು ವಾಪಸ್ ಕಳಿಸಿದ್ದಾರೆ.
ಕೆಆರ್ಎಸ್ನಿಂದ 90 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗಿದೆ. ಶ್ರೀರಂಗಪಟ್ಟಣದ ಕೋಟೆ ಗಣಪತಿ ದೇಗುಲ ಮುಳುಗಡೆಯಾಗಿದೆ. ಇನ್ನು ಗಂಜಾಂನಲ್ಲಿರುವ ನಿಮಿಷಾಂಬ ದೇಗುಲ ಸ್ನಾನಘಟ್ಟ ಜಲಾವೃತವಾಗಿದೆ. ರಂಗನಾಥ ಸ್ವಾಮಿ, ಪಶ್ಚಿಮ ವಾಹಿನಿ ಸ್ನಾನಘಟ್ಟಗಳು ಮುಳುಗಿದ್ದು ಭಕ್ತರಿಗೆ ನಿರ್ಬಂಧ ಹೇರಲಾಗಿದೆ.
ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ