ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಕಂದಕಕ್ಕೆ ಉರುಳಿದ ಬಸ್, 7 ಪ್ರಯಾಣಿಕರು ಸಾವು

Updated on: Aug 08, 2026 | 10:37 AM

ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿಬಿದ್ದಿದೆ. ಈ ದುರಂತದಲ್ಲಿ ಏಳು ಪ್ರಯಾಣಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಬೈರಾಗಢ-ಚಂಬಾ ಮಾರ್ಗದ ದೇವಿಕೋಠಿ ಬಳಿ ನಡೆದ ಈ ಘಟನೆಯಲ್ಲಿ ಒಟ್ಟು 22 ಪ್ರಯಾಣಿಕರಿದ್ದರು. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ.

ಶಿಮ್ಲಾ , ಆ.08: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್‌ಯೊಂದು ಚಾಲಕನ ನಿಯಂತ್ರಣ ತಪ್ಪಿ ಆಳವಾದ ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ ಏಳು ಪ್ರಯಾಣಿಕರು ದುರ್ಮರಣಕ್ಕೀಡಾಗಿದ್ದಾರೆ. ಈ ಭೀಕರ ದುರಂತವು ಬೈರಾಗಢ-ಚಂಬಾ ಮಾರ್ಗದ ದೇವಿಕೋಠಿ ಬಳಿ ಸಂಭವಿಸಿದೆ. ಬೈರಾಗಢದಿಂದ ಚಂಬಾಗೆ ತೆರಳುತ್ತಿದ್ದ ಖಾಸಗಿ ಬಸ್, ದೇವಿಕೋಠಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ದಿಢೀರನೆ ಕಂದಕಕ್ಕೆ ಉರುಳಿಬಿದ್ದಿದೆ. ಅಪಘಾತ ಸಂಭವಿಸಿದ ವೇಳೆ ಬಸ್‌ನಲ್ಲಿ ಒಟ್ಟು 22 ಪ್ರಯಾಣಿಕರಿದ್ದರು. ಈ ಪೈಕಿ 7 ಜನರು ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ ಹಲವು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ಪ್ರಪಾತದಿಂದ ಮೇಲೆತ್ತಿ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಲವರ ಸ್ಥಿತಿ ಚಿಂತಾಜನಕವಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us