AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಆಶ್ರಯ ಪಡೆದಿದ್ದು ಕೆಪಿಸಿಸಿ ಮಾಧ್ಯಮ ವಕ್ತಾರೆ ಅಂಜುಂ ಮನೆಯಲ್ಲಿ

ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಆಶ್ರಯ ಪಡೆದಿದ್ದು ಕೆಪಿಸಿಸಿ ಮಾಧ್ಯಮ ವಕ್ತಾರೆ ಅಂಜುಂ ಮನೆಯಲ್ಲಿ

ಅರುಣ್​ ಕುಮಾರ್​ ಬೆಳ್ಳಿ
|

Updated on: Sep 13, 2023 | 1:30 PM

Share

ಲಭ್ಯವಾಗಿರುವ ಮಾಹಿತಿ ಪ್ರಕಾರ ಬೆಂಗಳೂರು ಕೇಂದ್ರ ಅಪರಾಧ ದಳದ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಅಂಜುಂಗೆ ನೋಟೀಸ್ ನೀಡಿದ್ದಾರೆ. ಅಂಜುಂ ಮತ್ತು ಚೈತ್ರಾ ಕೇವಲ ಸ್ನೇಹಿತೆಯರು ಅಥವಾ ಅವರ ನಡುವೆ ಬೇರೆ ಲಿಂಕ್ ಏನಾದರೂ ಇದೆಯಾ ಅನ್ನೋದು ಪೊಲೀಸ್ ವಿಚಾರಣೆ ನಂತರವೇ ಗೊತ್ತಾಗಬೇಕು.  

ಬೆಂಗಳೂರು: ವಿಧಾನ ಸಭಾ ಚುನಾವಣೆಯಲ್ಲಿ (Assembly polls ) ಸ್ಪರ್ಧಿಸಲು ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ರೂ. 4 ಕೋಟಿ ವಂಚಿಸಿದ ಆರೋಪ ಎದುರಿಸುತ್ತಿರುವ ಚೈತ್ರಾ ಕುಂದಾಪುರಗೆ ಪೊಲೀಸರು ತನ್ನ ಬೇಟೆಯಾಡಲು ಇಳಿದಿರುವ ಸಂಗತಿ ಮೊದಲೇ ಗೊತ್ತಾಗಿಬಿಟ್ಟಿತ್ತು. ಹಾಗಾಗೇ, ಒಂದು ವಾರದಿಂದ ತಲೆಮರೆಸಿಕೊಂಡಿದ್ದ ಚೈತ್ರಾ ಅಡಗಿ ಕುಳಿತಿದ್ದಾದರೂ ಎಲ್ಲಿ ಗೊತ್ತ್ತಾ? ಕಾಂಗ್ರೆಸ್​​​ ಪಕ್ಷದ ಮಾಧ್ಯಮ ವಕ್ತಾರೆಯಾಗಿರುವ ಅಂಜುಂ ಎನ್ನುವವರ ಮನೆಯಲ್ಲಿ. ಅಂಜುಂ ಚೈತ್ರಾಗೆ ಆಶ್ರಯ ನೀಡಿದ್ದು ಯಾಕೆ ಅಂತ ಪೊಲೀಸರು ಕೆದಕುವ ಪ್ರಯತ್ನ ಮಾಡುತ್ತಿದ್ದಾರೆ. ನಮಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಬೆಂಗಳೂರು ಕೇಂದ್ರ ಅಪರಾಧ ದಳದ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಅಂಜುಂಗೆ ನೋಟೀಸ್ ನೀಡಿದ್ದಾರೆ. ಅಂಜುಂ ಮತ್ತು ಚೈತ್ರಾ ಕೇವಲ ಸ್ನೇಹಿತೆಯರು ಅಥವಾ ಅವರ ನಡುವೆ ಬೇರೆ ಲಿಂಕ್ ಏನಾದರೂ ಇದೆಯಾ ಅನ್ನೋದು ಪೊಲೀಸ್ ವಿಚಾರಣೆ ನಂತರವೇ ಗೊತ್ತಾಗಬೇಕು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More