AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಬಾಬರ್ ರಸ್ತೆಯ ಹೆಸರನ್ನು ಅಯೋಧ್ಯೆ ಎಂದು ಬದಲಾಯಿಸಿದ ಹಿಂದೂ ಕಾರ್ಯಕರ್ತರು

ಬಾಬರ್​​ ರಸ್ತೆಯ ಹೆಸರನ್ನು ಅಯೋಧ್ಯೆ ಎಂದು ಹಿಂದೂ ಕಾರ್ಯಕರ್ತರು ಬದಲಾವಣೆ ಮಾಡಿದ್ದಾರೆ. ಬಾಬರ್ ರಸ್ತೆಯ ಸೈನ್ ಬೋರ್ಡ್ ಮೇಲೆ ಅಯೋಧ್ಯೆ ಮಾರ್ಗ ಸ್ಟಿಕ್ಕರ್ ಅಂಟಿಸಲಾಗಿದೆ. ಈ ಘಟನೆ ಇಂದು ಬೆಳಿಗ್ಗೆ (ಜ.20) ಕಂಡು ಬಂದಿದೆ. ಬಾಬರ್ ರಸ್ತೆಯ ಹೆಸರನ್ನು ಬದಲಾಯಿಸಬೇಕೆಂದು ಹಿಂದೂ ಸೇನೆ ಬಹಳ ದಿನಗಳಿಂದ ಒತ್ತಾಯಿಸುತ್ತಿದ್ದರು ಎಂದು ಹೇಳಲಾಗಿದೆ.

ಅಕ್ಷಯ್​ ಪಲ್ಲಮಜಲು​​
|

Updated on: Jan 20, 2024 | 10:17 AM

Share

ದೆಹಲಿ, ಜ.20: ಅಯೋಧ್ಯೆಯಲ್ಲಿ ರಾಮ ಲಲ್ಲಾ ಪ್ರತಿಷ್ಠಾಪನೆಗೆ ಇನ್ನು ಎರಡು ದಿನ ಬಾಕಿದೆ. ರಾಮಮಂದಿರದಲ್ಲಿ ಸಕಲಸಿದ್ಧತೆಗಳು ನಡೆಯುತ್ತಿದೆ. ರಾಮ ಲಲ್ಲಾನ ಮೂರ್ತಿ ಕೂಡ ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ಇಡಲಾಗಿದೆ. ಇದರ ನಡುವೆ ದೆಹಲಿಯ ಬಾಬರ್​​ ರಸ್ತೆಯ ಹೆಸರನ್ನು ಅಯೋಧ್ಯೆ ಎಂದು ಹಿಂದೂ ಕಾರ್ಯಕರ್ತರು ಬದಲಾವಣೆ ಮಾಡಿದ್ದಾರೆ. ಬಾಬರ್ ರಸ್ತೆಯ ಸೈನ್ ಬೋರ್ಡ್ ಮೇಲೆ ಅಯೋಧ್ಯೆ ಮಾರ್ಗ ಸ್ಟಿಕ್ಕರ್ ಅಂಟಿಸಲಾಗಿದೆ. ಈ ಘಟನೆ ಇಂದು ಬೆಳಿಗ್ಗೆ (ಜ.20) ಕಂಡು ಬಂದಿದೆ. ಬಾಬರ್ ರಸ್ತೆಯ ಹೆಸರನ್ನು ಬದಲಾಯಿಸಬೇಕೆಂದು ಹಿಂದೂ ಸೇನೆ ಬಹಳ ದಿನಗಳಿಂದ ಒತ್ತಾಯಿಸುತ್ತಿದ್ದರು ಎಂದು ಹೇಳಲಾಗಿದೆ. ಈ ಬಗ್ಗೆ ಮಾತನಾಡಿದ ಹಿಂದೂ ಸೇನೆಯ ಅಧ್ಯಕ್ಷ ವಿಷ್ಣು ಗುಪ್ತಾ, ಹಿಂದೂ ಸೇನೆ ಬಹಳ ದಿನಗಳಿಂದ ಈ ರಸ್ತೆಯ ಹೆಸರನ್ನು ಬದಲಾಯಿಸುವಂತೆ ಒತ್ತಾಯಿಸುತ್ತಿದ್ದೇವು. ಈ ದೇಶವು ಭಗವಾನ್ ಶ್ರೀರಾಮ, ಶ್ರೀ ಕೃಷ್ಣ, ಶ್ರೀ ವಾಲ್ಮೀಕಿ, ಗುರು ರವಿದಾಸರಂತಹ ಮಹಾಪುರುಷರ ಹೆಸರು ಇಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇವು ಎಂದು ಹೇಳಿದ್ದಾರೆ. ಈಗ ಬಾಬರಿ ಮಸೀದಿ ಇಲ್ಲದಿರುವಾಗ ದೆಹಲಿಯ ಬಾಬರ್ ರಸ್ತೆಯಿಂದ ಏನು ಪ್ರಯೋಜನ? ಎಂದು ಪ್ರಶ್ನಿಸಿದರೆ. ಬಾಬರ್​​​ ರಸ್ತೆಯ ಹೆಸರನ್ನು ಅಯೋಧ್ಯೆ ಎಂದು ಬದಲಾಸಿರುವ ವಿಡಿಯೋವನ್ನು ಎಎನ್​​​ಐ ಹಂಚಿಕೊಂಡಿದೆ.  ಈ ವಿಡಿಯೋದಲ್ಲಿ ಬಾಬರ್​​ ಎಂದು ಬರೆದಿರುವ ರಸ್ತೆ ಬೋರ್ಡ್​​​ ಮೇಲೆ ಅಯೋಧ್ಯೆ ಎಂದು ಬರೆದಿರುವ ಸ್ಟಿಕ್ಕರ್  ಅಂಟಿಸುವುದನ್ನು  ಕಾಣಬಹುದು

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ
ವೈದ್ಯಕೀಯ ಪರೀಕ್ಷೆಗೆ ಕರೆತಂದ ವೇಳೆ ಶಂಕಿತ ಉಗ್ರ ಸುಹೇಲ್ ಉದ್ದಟತನ
ವೈದ್ಯಕೀಯ ಪರೀಕ್ಷೆಗೆ ಕರೆತಂದ ವೇಳೆ ಶಂಕಿತ ಉಗ್ರ ಸುಹೇಲ್ ಉದ್ದಟತನ
ಆಷಾಢದಲ್ಲಿ ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರ ಗಮನಕ್ಕೆ ಬಿಗ್ ಅಪ್​ಡೇಟ್
ಆಷಾಢದಲ್ಲಿ ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರ ಗಮನಕ್ಕೆ ಬಿಗ್ ಅಪ್​ಡೇಟ್