ದೆಹಲಿಯ ಬಾಬರ್ ರಸ್ತೆಯ ಹೆಸರನ್ನು ಅಯೋಧ್ಯೆ ಎಂದು ಬದಲಾಯಿಸಿದ ಹಿಂದೂ ಕಾರ್ಯಕರ್ತರು

ಬಾಬರ್​​ ರಸ್ತೆಯ ಹೆಸರನ್ನು ಅಯೋಧ್ಯೆ ಎಂದು ಹಿಂದೂ ಕಾರ್ಯಕರ್ತರು ಬದಲಾವಣೆ ಮಾಡಿದ್ದಾರೆ. ಬಾಬರ್ ರಸ್ತೆಯ ಸೈನ್ ಬೋರ್ಡ್ ಮೇಲೆ ಅಯೋಧ್ಯೆ ಮಾರ್ಗ ಸ್ಟಿಕ್ಕರ್ ಅಂಟಿಸಲಾಗಿದೆ. ಈ ಘಟನೆ ಇಂದು ಬೆಳಿಗ್ಗೆ (ಜ.20) ಕಂಡು ಬಂದಿದೆ. ಬಾಬರ್ ರಸ್ತೆಯ ಹೆಸರನ್ನು ಬದಲಾಯಿಸಬೇಕೆಂದು ಹಿಂದೂ ಸೇನೆ ಬಹಳ ದಿನಗಳಿಂದ ಒತ್ತಾಯಿಸುತ್ತಿದ್ದರು ಎಂದು ಹೇಳಲಾಗಿದೆ.

ದೆಹಲಿ, ಜ.20: ಅಯೋಧ್ಯೆಯಲ್ಲಿ ರಾಮ ಲಲ್ಲಾ ಪ್ರತಿಷ್ಠಾಪನೆಗೆ ಇನ್ನು ಎರಡು ದಿನ ಬಾಕಿದೆ. ರಾಮಮಂದಿರದಲ್ಲಿ ಸಕಲಸಿದ್ಧತೆಗಳು ನಡೆಯುತ್ತಿದೆ. ರಾಮ ಲಲ್ಲಾನ ಮೂರ್ತಿ ಕೂಡ ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ಇಡಲಾಗಿದೆ. ಇದರ ನಡುವೆ ದೆಹಲಿಯ ಬಾಬರ್​​ ರಸ್ತೆಯ ಹೆಸರನ್ನು ಅಯೋಧ್ಯೆ ಎಂದು ಹಿಂದೂ ಕಾರ್ಯಕರ್ತರು ಬದಲಾವಣೆ ಮಾಡಿದ್ದಾರೆ. ಬಾಬರ್ ರಸ್ತೆಯ ಸೈನ್ ಬೋರ್ಡ್ ಮೇಲೆ ಅಯೋಧ್ಯೆ ಮಾರ್ಗ ಸ್ಟಿಕ್ಕರ್ ಅಂಟಿಸಲಾಗಿದೆ. ಈ ಘಟನೆ ಇಂದು ಬೆಳಿಗ್ಗೆ (ಜ.20) ಕಂಡು ಬಂದಿದೆ. ಬಾಬರ್ ರಸ್ತೆಯ ಹೆಸರನ್ನು ಬದಲಾಯಿಸಬೇಕೆಂದು ಹಿಂದೂ ಸೇನೆ ಬಹಳ ದಿನಗಳಿಂದ ಒತ್ತಾಯಿಸುತ್ತಿದ್ದರು ಎಂದು ಹೇಳಲಾಗಿದೆ. ಈ ಬಗ್ಗೆ ಮಾತನಾಡಿದ ಹಿಂದೂ ಸೇನೆಯ ಅಧ್ಯಕ್ಷ ವಿಷ್ಣು ಗುಪ್ತಾ, ಹಿಂದೂ ಸೇನೆ ಬಹಳ ದಿನಗಳಿಂದ ಈ ರಸ್ತೆಯ ಹೆಸರನ್ನು ಬದಲಾಯಿಸುವಂತೆ ಒತ್ತಾಯಿಸುತ್ತಿದ್ದೇವು. ಈ ದೇಶವು ಭಗವಾನ್ ಶ್ರೀರಾಮ, ಶ್ರೀ ಕೃಷ್ಣ, ಶ್ರೀ ವಾಲ್ಮೀಕಿ, ಗುರು ರವಿದಾಸರಂತಹ ಮಹಾಪುರುಷರ ಹೆಸರು ಇಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇವು ಎಂದು ಹೇಳಿದ್ದಾರೆ. ಈಗ ಬಾಬರಿ ಮಸೀದಿ ಇಲ್ಲದಿರುವಾಗ ದೆಹಲಿಯ ಬಾಬರ್ ರಸ್ತೆಯಿಂದ ಏನು ಪ್ರಯೋಜನ? ಎಂದು ಪ್ರಶ್ನಿಸಿದರೆ. ಬಾಬರ್​​​ ರಸ್ತೆಯ ಹೆಸರನ್ನು ಅಯೋಧ್ಯೆ ಎಂದು ಬದಲಾಸಿರುವ ವಿಡಿಯೋವನ್ನು ಎಎನ್​​​ಐ ಹಂಚಿಕೊಂಡಿದೆ.  ಈ ವಿಡಿಯೋದಲ್ಲಿ ಬಾಬರ್​​ ಎಂದು ಬರೆದಿರುವ ರಸ್ತೆ ಬೋರ್ಡ್​​​ ಮೇಲೆ ಅಯೋಧ್ಯೆ ಎಂದು ಬರೆದಿರುವ ಸ್ಟಿಕ್ಕರ್  ಅಂಟಿಸುವುದನ್ನು  ಕಾಣಬಹುದು

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us