AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಲ್ಲಿ ಹಿಂದೂ ಮುಸ್ಲಿಂ ಯುವಕರು ಜೊತೆಯಾಗಿ ಗೌರಿ-ಗಣೇಶ ಹಬ್ಬ ಆಚರಿಸಿದರು!

ಮೈಸೂರಲ್ಲಿ ಹಿಂದೂ ಮುಸ್ಲಿಂ ಯುವಕರು ಜೊತೆಯಾಗಿ ಗೌರಿ-ಗಣೇಶ ಹಬ್ಬ ಆಚರಿಸಿದರು!

ಅರುಣ್​ ಕುಮಾರ್​ ಬೆಳ್ಳಿ
|

Updated on: Sep 18, 2023 | 6:53 PM

Share

ಈ ಸೌಹಾರ್ದತೆ ಕೇವಲ ಹಬ್ಬ ಹರಿದಿನಗಳಿಗೆ ಸೀಮಿತವಾಗಿದ್ದರೆ ಅದು ಒಳ್ಳೆಯ ಬೆಳವಣಿಗೆ ಅಲ್ಲ. ವರ್ಷದ ಎಲ್ಲ ದಿನಗಳಲ್ಲಿ ಈ ಏರಿಯಾದ ಹಿಂದೂ ಮುಸಲ್ಮಾನರು ಹೀಗೆ ಪರಸ್ಪರ ಪ್ರೀತಿ-ವಿಶ್ವಾಸ ಗಳಿಂದ ಬದುಕಿದರೆ ಅದು ಬೇರೆ ಏರಿಯಾಗಳ ನಿವಾಸಿಗಳಿಗೂ ಮಾದರಿಯಾಗುತ್ತದೆ.

ಮೈಸೂರು: ಮೈಸೂರಿನ ಒಂದು ಭಾಗದಲ್ಲಿ ಗೌರಿ ಗಣೇಶ ಹಬ್ಬವನ್ನು (Gowri Ganesh Festival) ವಿಶಿಷ್ಟವಾದ ರೀತಿಯಲ್ಲಿ ಆಚರಿಸಿ ವಿನಾಯಕನನ್ನು ಪ್ರತಿಷ್ಠಾಪಿಸಲಾಯಿತು. ಈ ಆಚರಣೆಗೆ ಕೋಮು ಸೌಹಾರ್ದತೆಗೂ (communal harmony) ಸಾಕ್ಷಿಯಾಯಿತು ಅನ್ನೋದು ಸಹ ಅಷ್ಟೇ ಸತ್ಯ ಮಾರಾಯ್ರೇ. ವಿಡಿಯೋ ನೋಡಿದರೆ ವಿಷಯ ಏನು ಅಂತ ನಿಮಗೆ ಗೊತ್ತಾಗುತ್ತದೆ. ಗಣೇಶನ ಪ್ರತಿಷ್ಠಾಪನೆ (Ganesh installation) ಮತ್ತು ಪೂಜೆಯಲ್ಲಿ ಏರಿಯಾದ ಮುಸಲ್ಮಾನರು ಸಹ ಭಾಗಿಯಾದರು. ಹಿಂದೂ ಯುವಕರು ಮುಸಲ್ಮಾನರನ್ನು ಪೂಜೆಗೆ ಆಹ್ವಾನಿಸಿದ್ದು ಮತ್ತು ಮುಸಲ್ಮಾನ ಯುವಕರು ಅವರ ಆಹ್ವಾನವನ್ನು ಸ್ವೀಕರಿಸಿ ಪೂಜೆಗೆ ಹಾಜರಾಗಿದ್ದು ನಿಸ್ಸಂದೇಹವಾಗಿ ಒಂದು ಉತ್ತಮ ಸಂದೇಶವನ್ನು ಸಮಾಜಕ್ಕೆ ನೀಡುತ್ತದೆ. ಕೂಡಿ ಬಾಳಿದರೆ ಸ್ವರ್ಗ ಸುಖ ಅನ್ನುತ್ತಾರಲ್ಲ ಹಾಗೆ! ಈ ಸೌಹಾರ್ದತೆ ಕೇವಲ ಹಬ್ಬ ಹರಿದಿನಗಳಿಗೆ ಸೀಮಿತವಾಗಿದ್ದರೆ ಅದು ಒಳ್ಳೆಯ ಬೆಳವಣಿಗೆ ಅಲ್ಲ. ವರ್ಷದ ಎಲ್ಲ ದಿನಗಳಲ್ಲಿ ಈ ಏರಿಯಾದ ಹಿಂದೂ ಮುಸಲ್ಮಾನರು ಹೀಗೆ ಪರಸ್ಪರ ಪ್ರೀತಿ-ವಿಶ್ವಾಸ ಗಳಿಂದ ಬದುಕಿದರೆ ಅದು ಬೇರೆ ಏರಿಯಾಗಳ ನಿವಾಸಿಗಳಿಗೂ ಮಾದರಿಯಾಗುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More