ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು

Edited By: ಆಯೇಷಾ ಬಾನು

Updated on: Sep 16, 2024 | 2:35 PM

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಬಾಂಧವರು ಭಾವೈಕ್ಯತೆ ಮೆರೆದಿದ್ದಾರೆ. ಈದ್ ಮಿಲಾದ್ ಅಂಗವಾಗಿ ಮಕ್ಕಳಿಗೆ ಪುಸ್ತಕ ಹಾಗೂ ಹೋಳಿಗೆ ವಿತರಣೆ ಮಾಡಲಾಗಿದೆ. ಗಣೇಶೋತ್ಸವದಲ್ಲಿ ಮುಸ್ಲಿಂ ಬಾಂಧವರು ಭಾಗಿಯಾಗಿದ್ದಾರೆ. ಪರಸ್ಪರ ಶುಭ ಕೋರಿ ಮಾನವೀಯತೆ ಮೆರೆದಿದ್ದಾರೆ.

ಮೈಸೂರು, ಸೆ.16: ರಾಜ್ಯದ ಹಲವೆಡೆ ಹಿಂದೂ-ಮುಸ್ಲಿಂ ಸಮುದಾಯದ ನಡುವೆ ಗಲಾಟೆಗಳು ನಡೆಯುತ್ತಿವೆ. ಇದರ ನಡುವೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಬಾಂಧವರು ಭಾವೈಕ್ಯತೆ ಮೆರೆದಿದ್ದಾರೆ. ಈದ್ ಮಿಲಾದ್ ಅಂಗವಾಗಿ ಮಕ್ಕಳಿಗೆ ಪುಸ್ತಕ ಹಾಗೂ ಹೋಳಿಗೆ ವಿತರಣೆ ಮಾಡಲಾಗಿದೆ. ಮೈಸೂರಿನ ಸುಣ್ಣದ ಕೇರಿಯಲ್ಲಿ ಶ್ರೀವಿನಾಯಕ ಗೆಳೆಯರ ಬಳಗದಿಂದ ಗಣಪತಿ ಪ್ರತಿಷ್ಠಾಪನೆ ಮಾಡಲಾಗಿದ್ದು ಗಣೇಶೋತ್ಸವದಲ್ಲಿ ಮುಸ್ಲಿಂ ಬಾಂಧವರು ಭಾಗಿಯಾಗಿದ್ದಾರೆ. ಪರಸ್ಪರ ಶುಭ ಕೋರಿ ಮಾನವೀಯತೆ ಮೆರೆದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More