ನಾಗಮಂಗಲ: ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ಒಟ್ಟಾಗಿ ಗಣೇಶ ವಿಸರ್ಜನೆ

Edited By: ಆಯೇಷಾ ಬಾನು

Updated on: Sep 21, 2024 | 1:14 PM

ಅಪರೂಪದ ಘಟನೆಗೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೊಪ್ಪ ಪಟ್ಟಣ ಸಾಕ್ಷಿಯಾಗಿದೆ. ಹಿಂದೂ ಮುಸ್ಲಿಂ ಯುವಕರು ಒಟ್ಟಾಗಿ ಸೇರಿ ಗಣೇಶನ ವಿಸರ್ಜನೆ ಮಾಡಿದ್ದಾರೆ. ಗಣೇಶನ ವಿಸರ್ಜನೆ ವೇಳೆ ಮುಸ್ಲಿಂ ಯುವಕರು ಕೂಡ ಭಾಗಿಯಾಗಿದ್ದು ಪರಸ್ಪರ ಟೋಪಿ, ಶಾಲು ಹಾಕಿ ಸಾಮರಸ್ಯ ತೋರಿದ್ದಾರೆ.

ಮಂಡ್ಯ, ಸೆ.21: ಒಂದೆಡೆ ಕೋಮುಗಲಭೆಯಿಂದ ಮಂಡ್ಯ ಜಿಲ್ಲೆ ನಾಗಮಂಗಲ ಹೊತ್ತಿ ಉರಿದಿದೆ. ಮತ್ತೊಂದೆಡೆ ಗಣೇಶನ ಮೂರ್ತಿ ವಿಸರ್ಜನೆ ವೇಳೆ ಹಿಂದೂ ಮುಸ್ಲಿಂ ಯುವಕರು ಒಟ್ಟಾಗಿ ಕೈ ಜೋಡಿಸಿ ಭಾವೈಕ್ಯತೆ ಮೆರೆದಿದ್ದಾರೆ. ಗಣೇಶನ ವಿಸರ್ಜನೆ ವೇಳೆ ಮುಸ್ಲಿಂ ಯುವಕರು ಕೂಡ ಭಾಗಿಯಾಗಿದ್ದು ಪರಸ್ಪರ ಟೋಪಿ, ಶಾಲು ಹಾಕಿ ಸಾಮರಸ್ಯ ತೋರಿದ್ದಾರೆ. ಮುಸ್ಲಿಂ ಯುವಕ ಹಿಂದೂ ಯುವಕನಿಗೆ ಟೋಪಿ ಹಾಕಿದ್ದು ಹಿಂದೂ ಯುವಕ ಮುಸ್ಲಿಂ ಯುವಕನಿಗೆ ಕೇಸರಿ ಶಾಲು ಹಾಕಿದ್ದಾನೆ. ಮುಸ್ಲಿಂ ಯುವಕ ಗಣೇಶ ಮೂರ್ತಿ ಇದ್ದ ಟ್ರಾಕ್ಟರ್ ಚಾಲನೆ ಮಾಡಿದ್ದಾನೆ. ಹಿಂದೂ ಮುಸ್ಲಿಂ ಯುವಕರು ಒಟ್ಟಾಗಿ ಸೇರಿ ಗಣೇಶನ ವಿಸರ್ಜನೆ ಮಾಡಿದ್ದಾರೆ. ಅಪರೂಪದ ಘಟನೆಗೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೊಪ್ಪ ಪಟ್ಟಣ ಸಾಕ್ಷಿಯಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Published on: Sep 21, 2024 01:14 PM
Follow Us
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More