ಹಿಂದೂ-ಮುಸ್ಲಿಂ ಬಾಂಧವರು ಸೇರಿಕೊಂಡು ಮೊಹರಂ ಹಬ್ಬ ಆಚರಣೆ: ಭಾವೈಕ್ಯತೆಯ ಸಂದೇಶ ಸಾರಿದ ಕುರ್ತಕೋಟಿ ಗ್ರಾಮ

Edited By:

Updated on: Jul 29, 2023 | 7:23 PM

ಗದಗ ತಾಲೂಕಿನ ಕುರ್ತಕೋಟಿ ಗ್ರಾಮದಲ್ಲಿ ಮೊಹರಂ ಹಬ್ಬವನ್ನು ಹಿಂದೂ-ಮುಸ್ಲಿಂ ಒಟ್ಟಿಗೆ ಆಚರಿಸುವ ಮೂಲಕ ಭಾವೈಕ್ಯತೆ ಸಾರಿದ್ದಾರೆ. ಹೆಜ್ಜೆ ಮಜಲು, ಕೋಲಾಟ ಆಡುತ್ತಾ ಅಲೆ ದೇವರ ಮೆರವಣಿಗೆಯಲ್ಲಿ ಸಾವಿರಾರು ಜನರು ಭಾಗಿಯಾಗಿದ್ದಾರೆ. 

ಗದಗ, ಜುಲೈ 29: ಶಾಂತಿಗಾಗಿ ಹುತಾತ್ಮರಾದವರನ್ನು ಸ್ಮರಿಸುವ ಶೋಕದ ಹಬ್ಬವೇ ಮೊಹರಂ ಹಬ್ಬ (Muharram). ಭೇದ- ಭಾವ, ಜಾತಿ, ಧರ್ಮ ಎನ್ನದೇ ಭಾವೈಕ್ಯತೆಯ ಈ ಮೊಹರಂ ಹಬ್ಬವನ್ನು ಇಂದು ರಾಜ್ಯದೆಲ್ಲೆಡೆ ಸಂಭ್ರಮದಿಂದ ಆಚರಿಸಲಾಗಿದೆ. ಅದೇ ರೀತಿಯಾಗಿ ಗದಗ ತಾಲೂಕಿನ ಕುರ್ತಕೋಟಿ ಗ್ರಾಮದಲ್ಲಿ ಸಹ ಮೊಹರಂ ಹಬ್ಬವನ್ನು ಹಿಂದೂ-ಮುಸ್ಲಿಂ ಒಟ್ಟಿಗೆ ಆಚರಿಸುವ ಮೂಲಕ ಭಾವೈಕ್ಯತೆ ಸಾರಿದ್ದಾರೆ. ಅಲೆ ದೇವರ ಮೆರವಣಿಗೆಯಲ್ಲಿ ಹೆಜ್ಜೆ ಮಜಲು, ಕೋಲಾಟ ಆಡುತ್ತಾ ಸಾವಿರಾರು ಜನರು ಭಾಗಿಯಾಗಿದ್ದಾರೆ.

ಮತ್ತಷ್ಟು ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Jul 29, 2023 07:21 PM
Follow Us
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More