ಕಾಡುಗೊಲ್ಲ ಸಮಾಜವನ್ನು ಎಸ್​ಟಿ ಪಟ್ಟಿಗೆ ಸೇರಿಸುವಂತೆ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಒತ್ತಾಯ

Edited By: ವಿವೇಕ ಬಿರಾದಾರ

Updated on: Dec 12, 2022 | 10:08 PM

ಕಾಡುಗೊಲ್ಲ ಸಮಾಜವನ್ನು ಎಸ್​ಟಿ ಪಟ್ಟಿಗೆ ಸೇರಿಸುವಂತೆ ಹಿರಿಯೂರು ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಒತ್ತಾಯಿಸಿದ್ದಾರೆ.

ನವದೆಹಲಿ: ಕಾಡುಗೊಲ್ಲ ಸಮಾಜವನ್ನು ಎಸ್​ಟಿ ಪಟ್ಟಿಗೆ ಸೇರಿಸುವಂತೆ ಹಿರಿಯೂರು ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ (Poornima Srinivas) ಒತ್ತಾಯಿಸಿದ್ದಾರೆ. 2008ರಲ್ಲಿ ಮಾಜಿ ಸಿಎಂ ಯಡಿಯೂರಪ್ಪ (BS Yadiyurappa) ಕಮಿಟಿ ರಚನೆ ಮಾಡಿದ್ದರು. ಎಸ್​ಟಿ ಮೀಸಲಾತಿ ನೀಡಲು ಕುಲಶಾಸ್ತ್ರ ಅಧ್ಯಯನ ಮಾಡಿಸಿದ್ದರು. ಸಿದ್ದರಾಮಯ್ಯ ಸರ್ಕಾರದಲ್ಲೂ ಇದನ್ನು ಕ್ಯಾಬಿನೆಟ್​ನಲ್ಲಿ ಇಡಲಾಗಿತ್ತು. ಮತ್ತು ಕಾಡುಗೊಲ್ಲ ಸಮುದಾಯಕ್ಕೆ ಎಸ್​ಟಿ ಮೀಸಲಾತಿ ಅಗತ್ಯವಿದೆ ಎಂದು ಕೇಂದ್ರಕ್ಕೆ ಶಿಫಾರಸು ಮಾಡಲಾಗಿತ್ತು. ಕೆಲವು ಸಣ್ಣ ಗೊಂದಲಗಳಿಗೆ ಈಗಾಗಲೇ ಕೇಂದ್ರಕ್ಕೆ ಉತ್ತರಿಸಲಾಗಿದೆ. ಈಗಾಗಲೇ ತಳವಾರ, ಬೆಟ್ಟ ಕುರುಬ ಸಮುದಾಯವನ್ನು ಪರಿಗಣಿಸಿದೆ. ಅದೇ ಮಾದರಿಯಲ್ಲಿ ಕಾಡುಗೊಲ್ಲರಿಗೆ ಮೀಸಲಾತಿ ನೀಡಿ ಎಂದು ಆಗ್ರಹಿಸಿದ್ದಾರೆ.

 

Loading...
Unable to load recommendations.
Follow Us