AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಪತ್ನಿಯನ್ನು ಗ್ರಾಪ ಪಂಚಾಯಿತಿ ಅಧ್ಯಕ್ಷೆಯಾಗಿಸುವ ಕಸರತ್ತು ನಡೆಸಿದ್ದ ಪತಿ ಗುರಿ ಈಡೇರುವ ಮೊದಲೇ ರಸ್ತೆ ಅಪಘಾತಕ್ಕೆ ಬಲಿ!

ನೆಲಮಂಗಲ: ಪತ್ನಿಯನ್ನು ಗ್ರಾಪ ಪಂಚಾಯಿತಿ ಅಧ್ಯಕ್ಷೆಯಾಗಿಸುವ ಕಸರತ್ತು ನಡೆಸಿದ್ದ ಪತಿ ಗುರಿ ಈಡೇರುವ ಮೊದಲೇ ರಸ್ತೆ ಅಪಘಾತಕ್ಕೆ ಬಲಿ!

ಅರುಣ್​ ಕುಮಾರ್​ ಬೆಳ್ಳಿ
|

Updated on: Aug 07, 2023 | 12:22 PM

ಕೇಶವ್ ರೆಡ್ಡಿ ತನ್ನ ಅಣ್ಣ ರಾಮರೆಡ್ಡಿಯ ಫ್ಯಾಕ್ಟರಿ ಕಡೆ ಕಳೆದ ರಾತ್ರಿ ಹೋಗುತ್ತಿದ್ದಾಗ ಡಾಬಸ್ ಪೇಟೆ ಬಳಿ ಅವರ ಕಾರಿಗೆ ಕ್ಯಾಂಟರ್ ಒಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮವಾಗಿ ರೆಡ್ಡಿ ಮತ್ತು ಶ್ರೀನಿವಾಸ್ ಹೆಸರಿನ ಇನ್ನೊಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ

ನೆಲಮಂಗಲ: ತಾನೊಂದು ಬಗೆದರೆ ಮಾನವ ಬೇರೊಂದು ಬಗೆಯಿತು ದೈವ ಅಂತ ಹಳೆಯ ಕನ್ನಡ ಸಿನಿಮಾ ಹಾಡೊಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಂಗೊಂಡಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಅಮರಾವತಿ (Amaravati) ಬದುಕಿನಲ್ಲಿ ನಡೆದಿದ್ದು ಅದೇ. ಜೆಡಿಎಸ್ ಪಕ್ಷದ (JDS Party) ಅಮರಾವತಿಯನ್ನು ಗ್ರಾಮ ಪಂಚಾಯಿತಿಯ ಅಧ್ಯಕ್ಷೆಯನ್ನಾಗಿ ಮಾಡಲು ಅವರ ಪತಿ ಕೇಶವ್ ರೆಡ್ಡಿ (Keshav Reddy) ಪಟ್ಟ ಶ್ರಮ ಅಷ್ಟಿಷ್ಟಲ್ಲ. ವಿರೋಧ ಪಕ್ಷದವರು ಪಕ್ಷದ ಚುನಾಯಿತ ಸದಸ್ಯರನ್ನು ಸೆಳೆದುಕೊಳ್ಳುವುದು ತಪ್ಪಿಸಲು ಒಟ್ಟು 8 ಜನರನ್ನು ಶಿರ್ಡಿ, ಮುಂಬೈ ಟ್ರಿಪ್ ಕರೆದುಕೊಂಡು ಹೋಗಿ ನಿನ್ನೆ ರಾತ್ರಿಯಷ್ಟೇ ವಾಪಸ್ಸಾಗಿದ್ದರು. ಅಮರಾವತಿ ಹೇಳುವಂತೆ, ಕೇಶವ್ ರೆಡ್ಡಿ ತನ್ನ ಅಣ್ಣ ರಾಮರೆಡ್ಡಿಯ ಫ್ಯಾಕ್ಟರಿ ಕಡೆ ಕಳೆದ ರಾತ್ರಿ ಹೋಗುತ್ತಿದ್ದಾಗ ಡಾಬಸ್ ಪೇಟೆ ಬಳಿ ಅವರ ಕಾರಿಗೆ ಕ್ಯಾಂಟರ್ ಒಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮವಾಗಿ ರೆಡ್ಡಿ ಮತ್ತು ಶ್ರೀನಿವಾಸ್ ಹೆಸರಿನ ಇನ್ನೊಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಮರಾವತಿ ದಾರಣ ಘಟನೆಯನ್ನು ಮಾಧ್ಯಮದವರ ಮುಂದೆ ಹೇಳಿಕೊಂಡರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ