ಅಂಜಲಿ ತಂಗಿ ಜೀವ ಕಳೆದುಕೊಳ್ಳುವ ಪ್ರಯತ್ನ ಮಾಡಿದ್ದು ಗೊತ್ತಾಗುತ್ತಿದ್ದಂತೆಯೇ ಹುಬ್ಬಳ್ಳಿಗೆ ಧಾವಿಸಿದ ಪರಮೇಶ್ವರ್

ಅರುಣ್​ ಕುಮಾರ್​ ಬೆಳ್ಳಿ

Updated on: May 20, 2024 | 6:32 PM

ನೀನು ವಿಷ ಸೇವಿಸಿದ ವಿಷಯ ಗೊತ್ತಾದ ಕೂಡಲೇ ನಿನ್ನನ್ನು ನೋಡಲು ಬಂದಿರುವೆ, ನಾವೆಲ್ಲ ನಿನ್ನ ಜೊತೆ ಇದ್ದೇವೆ, ಯಾವುದಕ್ಕೂ ಹೆದರಬೇಡ, ನಿಮಗೆ ಎಲ್ಲ ರೀತಿಯಿಂದಲೂ ನೆರವಾಗುತ್ತೇವೆ, ಚುನಾವಣಾ ನೀತಿ ಸಂಹಿತೆ ಇನ್ನೂ ಜಾರಿಯಲ್ಲಿರುವುದರಿಂದ ಈಗ ಏನನ್ನೂ ಘೋಷಣೆ ಮಾಡಲಾಗಲ್ಲ, ಆದರೆ ಖಂಡಿತ ನೆರವು ಒದಗಿಸುತ್ತೇವೆ ಪರಮೇಶ್ವರ್ ಭರವಸೆ ನೀಡಿದರು.

ಹುಬ್ಬಳ್ಳಿ: ನಿಮಗೆ ನೆನಪಿರಬಹುದು, ನೇಹಾ ಹಿರೇಮಠ ಹತ್ಯೆಯಾದ ಬಳಿಕ ತನಗೆ ಫೋನ್ ಮಾಡಿ ಮಾತಾಡುವ ಸೌಜನ್ಯತೆಯನ್ನು ಗೃಹ ಸಚಿವ ಜಿ ಪರಮೇಶ್ವರ್ (G Parameshwara) ತೋರಲಿಲ್ಲ ಎಂದು ನೇಹಾಳ ತಂದೆ ನಿರಂಜನ ಹಿರೇಮಠ (Niranjan Hiremath) ಹೇಳಿದ್ದನ್ನು ನಾವು ವರದಿ ಮಾಡಿದ್ದೆವು. ಆದರೆ, ಇವತ್ತು ಪರಮೇಶ್ವರ್ ಅಂಜಲಿ ಅಂಬಿಗೇರ್ (Anajali Ambiger) ಮನೆಗೆ ಭೇಟಿ ನೀಡಿದಾಗ ನಿರಂಜನ್ ಅದನ್ನು ಮರೆತು, ಸಚಿವರ ಜೊತೆ ಓಡಾಡಿದರು. ಹಾಗೇ ನೋಡಿದರೆ, ಅಂಜಲಿ ಹತ್ಯೆಯಾದಾಗಲೂ ಪರಮೇಶ್ವರ್ ಅವರ ಮನೆಗೆ ಬಂದಿಲಿಲ್ಲ. ಅದರೆ, ಅಕ್ಕನ ಭೀಕರ ಹತ್ಯೆಯನ್ನು ಕಣ್ಣಾರೆ ನೋಡಿದ ಯಶೋಧ ಅಂಬಿಗೇರ್ ನಿನ್ನೆ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಯತ್ನ ಮಾಡಿದ ಸುದ್ದಿ ಗೊತ್ತಾದ ಕೂಡಲೇ ಪರೆಮೇಶ್ವರ್ ಇಲ್ಲಿಗೆ ದೌಡಾಯಿಸಿದರು. ಬಿಕ್ಕುತ್ತ್ತಿರುವ ಯಶೋಧಳ ಕಣ್ಣೀರು ಒರೆಸಿ, ತಲೆ ನೇವರಿಸಿ ಗೃಹ ಸಚಿವ ಸಾಂತ್ವನ ಹೇಳುವುದನ್ನು ಇಲ್ಲಿ ನೋಡಬಹುದು.

ಜೀವ ಕಳೆದುಕೊಳ್ಳುವ ಹುಚ್ಚು ಪ್ರಯತ್ನಕ್ಕೆ ಕೈ ಹಾಕಬಾರದು, ನೀನು ವಿಷ ಸೇವಿಸಿದ ವಿಷಯ ಗೊತ್ತಾದ ಕೂಡಲೇ ನಿನ್ನನ್ನು ನೋಡಲು ಬಂದಿರುವೆ, ನಾವೆಲ್ಲ ನಿನ್ನ ಜೊತೆ ಇದ್ದೇವೆ, ಯಾವುದಕ್ಕೂ ಹೆದರಬೇಡ, ನಿಮಗೆ ಎಲ್ಲ ರೀತಿಯಿಂದಲೂ ನೆರವಾಗುತ್ತೇವೆ, ಚುನಾವಣಾ ನೀತಿ ಸಂಹಿತೆ ಇನ್ನೂ ಜಾರಿಯಲ್ಲಿರುವುದರಿಂದ ಈಗ ಏನನ್ನೂ ಘೋಷಣೆ ಮಾಡಲಾಗಲ್ಲ, ಆದರೆ ಖಂಡಿತ ನೆರವು ಒದಗಿಸುತ್ತೇವೆ ಪರಮೇಶ್ವರ್ ಭರವಸೆ ನೀಡಿದರು. ಯಶೋಧಳ ಅಜ್ಜಿಗೂ ಸಚಿವ ಧೈರ್ಯದಿಂದರಲು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಎಸ್ಐಟಿ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದೆ, ಪ್ರಜ್ವಲ್ ನನ್ನು ಸೆಕ್ಯೂರ್ ಮಾಡುವ ಪ್ರಕ್ರಿಯೆ ಜಾರಿಯಲ್ಲಿದೆ: ಪರಮೇಶ್ವರ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.