ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಅಬ್ವರ: ಭೋರ್ಗರೆಯುತ್ತಿರುವ ಹೊಗೇನಕಲ್ ಜಲಪಾತ
ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ಹೊಗೇನಕಲ್ ಮತ್ತು ಭರಚುಕ್ಕಿ ಜಲಪಾತಗಳು ಭೋರ್ಗರೆಯುತ್ತಿವೆ. ಕಾವೇರಿ ನದಿಯ ರೌದ್ರ ನರ್ತನದಿಂದ ಜಲಪಾತಗಳು ಹಾಲು ನೊರೆಯಂತೆ ಧುಮ್ಮಿಕ್ಕುತ್ತಿದ್ದು, ಹಚ್ಚ ಹಸಿರಿನ ಪರಿಸರದಲ್ಲಿ ಅದ್ಭುತ ದೃಶ್ಯ ವೈಭವವನ್ನು ಸೃಷ್ಟಿಸಿವೆ. ಈ ಪ್ರಾಕೃತಿಕ ಸೊಬಗನ್ನು ಕಣ್ಣಾರೆ ನೋಡಲು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.
ಚಾಮರಾಜನಗರ, ಆಗಸ್ಟ್ 05: ಕಾವೇರಿ ಜಲಾನಯನ ಪ್ರದೇಶದಲ್ಲಿ ಇತ್ತೀಚೆಗೆ ಸುರಿದ ನಿರಂತರ ಮಳೆಯಿಂದಾಗಿ ಕಾವೇರಿ ನದಿಯು ಮೈದುಂಬಿ ಹರಿಯುತ್ತಿದೆ. ಇದರ ಪರಿಣಾಮವಾಗಿ, ಕರ್ನಾಟಕ ಮತ್ತು ತಮಿಳುನಾಡು ಗಡಿಯಲ್ಲಿರುವ ಹೊಗೇನಕಲ್ ಜಲಪಾತ ಭೋರ್ಗರೆಯುತ್ತಿದ್ದು, ನೋಡುಗರ ಕಣ್ಮನ ಸೆಳೆಯುತ್ತಿವೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ತಮಿಳುನಾಡು ಗಡಿಯಲ್ಲಿರುವ ಈ ಜಲಪಾತವು ಪ್ರವಾಸಿಗರ ಅಚ್ಚುಮೆಚ್ಚಿನ ತಾಣವಾಳಾಗಿ ಮಾರ್ಪಟ್ಟಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
