AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lunar Eclipse 2026: ಮಾ.03ರ ಚಂದ್ರಗ್ರಹಣ; ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?

Lunar Eclipse 2026: ಮಾ.03ರ ಚಂದ್ರಗ್ರಹಣ; ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?

ಅಕ್ಷತಾ ವರ್ಕಾಡಿ
|

Updated on:Mar 01, 2026 | 11:57 AM

Share

ಗವಿ ಗಂಗಾಧರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಸೋಮಸುಂದರ ದೀಕ್ಷಿತ್ ಅವರು ಚಂದ್ರಗ್ರಹಣದ ಕುರಿತು ಮಾತನಾಡಿದ್ದಾರೆ. ಹೋಳಿ ಹುಣ್ಣಿಮೆಯಂದು ಸಂಭವಿಸುವ ಈ ಗ್ರಹಣದ ಪ್ರಕೃತಿ ಮತ್ತು ಪ್ರಸ್ತುತ ವಿದ್ಯಮಾನಗಳ ಮೇಲಿನ ಪರಿಣಾಮಗಳನ್ನು ವಿವರಿಸಿದ್ದಾರೆ. ಗ್ರಹಣ ಕಾಲದಲ್ಲಿ ಗರ್ಭಿಣಿಯರು, ಮಕ್ಕಳು ಪಾಲಿಸಬೇಕಾದ ನಿಯಮಗಳು ಹಾಗೂ ನಂತರ ಕೈಗೊಳ್ಳಬೇಕಾದ ಪರಿಹಾರ ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ಗವಿ ಗಂಗಾಧರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಸೋಮಸುಂದರ ದೀಕ್ಷಿತ್ ಅವರು ಹೋಳಿ ಹುಣ್ಣಿಮೆಯಂದು ಸಂಭವಿಸುವ ಚಂದ್ರಗ್ರಹಣದ ಕುರಿತು ವಿವರಣೆ ನೀಡಿದ್ದಾರೆ. ಇತ್ತೀಚೆಗೆ ನಡೆದ ಸೂರ್ಯಗ್ರಹಣದ ನಂತರ, ಹದಿನೈದು ದಿನಗಳ ಅಂತರದಲ್ಲಿ ಬರುವ ಈ ಚಂದ್ರಗ್ರಹಣವು ಪ್ರಕೃತಿ ಮತ್ತು ಪ್ರಸ್ತುತ ವಿದ್ಯಮಾನಗಳ ಮೇಲೆ ಪರಿಣಾಮ ಬೀರಬಹುದು ಎಂದು ಅವರು ತಿಳಿಸಿದ್ದಾರೆ.

ಗ್ರಹಣದ ಆರಂಭ ಮತ್ತು ಯುದ್ಧದ ನಡುವೆ ಸಾಮ್ಯತೆಯನ್ನು ಗುರುತಿಸಿದ ಅವರು, ಪ್ರಸ್ತುತ ಜಾಗತಿಕ ಸಂಘರ್ಷಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಭಾರತ ದೇಶವು ಯಜ್ಞಭೂಮಿ, ಕರ್ಮಭೂಮಿ, ತಪೋಭೂಮಿ, ಜಪಭೂಮಿ ಆಗಿರುವುದರಿಂದ ಯಾವುದೇ ಅವಘಡಗಳು ಸಂಭವಿಸದಿರಲಿ ಎಂದು ಪ್ರಾರ್ಥಿಸಿದ್ದಾರೆ. ರಾಜಕೀಯ ವಿಶ್ಲೇಷಣೆಗೆ ಆಸಕ್ತಿ ತೋರದಿದ್ದರೂ, ದೇಶದಲ್ಲಿ ಮತ್ತು ಕರ್ನಾಟಕದಲ್ಲಿ ಶಾಂತಿ ನೆಲೆಸಲಿ ಎಂದು ಅವರು ಆಶಿಸಿದ್ದಾರೆ. ಗ್ರಹಣದ ಸಮಯದಲ್ಲಿ ಗರ್ಭಿಣಿಯರು ಮತ್ತು ಮಕ್ಕಳು ಮನೆಯಿಂದ ಹೊರಬರಬಾರದು. ಗ್ರಹಣಾನಂತರ ಸ್ನಾನ ಮಾಡಿ, ಶುಚಿತ್ವ ಕಾಪಾಡಿಕೊಂಡು, ಮರುದಿನ ಶಿವನ ದೇವಸ್ಥಾನಕ್ಕೆ ಅಕ್ಕಿ, ಉದ್ದು, ಎಣ್ಣೆ ಅರ್ಪಿಸಲು ಸೂಚಿಸಿದ್ದಾರೆ.

ಇದನ್ನೂ ಓದಿ: ಮಾ.03 ವರ್ಷದ ಮೊದಲ ಚಂದ್ರಗ್ರಹಣ; ಇದು ಭಾರತದಲ್ಲಿ ಗೋಚರಿಸುತ್ತಾ?

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Mar 01, 2026 11:55 AM
Follow Us