ಗಡಿ ಜಿಲ್ಲೆಗಳ ಎಸ್ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಗೃಹ ಸಚಿವ ಅಮಿತ್ ಶಾ
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಶಾ ಅವರು ನವದೆಹಲಿಯಲ್ಲಿ ನಡೆದ 'ಗಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಮ್ಮೇಳನ-2026' ರ ನೇತೃತ್ವ ವಹಿಸಿ, ಭಾರತದ ಭೂ ಗಡಿಯುದ್ದಕ್ಕೂ ಇರುವ ಸುಮಾರು 119 ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಸೂಕ್ಷ್ಮ ಗಡಿ ಪ್ರದೇಶಗಳಲ್ಲಿನ ಸದ್ಯದ ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡುವ ಮೂಲಕ ಮತ್ತು ಕಾನೂನು ಜಾರಿಯನ್ನು ಸುಧಾರಿಸುವ ಕ್ರಮಗಳನ್ನು ಗುರುತಿಸುವ ಮೂಲಕ ದೇಶದ ಗಡಿ ಭದ್ರತಾ ವ್ಯವಸ್ಥೆಯನ್ನು ಬಲಪಡಿಸಲು ಸಭೆಯಲ್ಲಿ ಅಮಿತ್ ಶಾ ಸೂಚಿಸಿದರು.
ನವದೆಹಲಿ, ಜುಲೈ 9: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಇಂದು ನವದೆಹಲಿಯಲ್ಲಿ ಗಡಿ ಜಿಲ್ಲೆಗಳ 119 ಪೊಲೀಸ್ ವರಿಷ್ಠಾಧಿಕಾರಿಗಳ (ಎಸ್ಪಿ) ಜೊತೆ ಮಹತ್ವದ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ಉತ್ತರಾಖಂಡ, ರಾಜಸ್ಥಾನ, ಗುಜರಾತ್, ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳು ಸೇರಿದಂತೆ ಗಡಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೊಲೀಸ್ ವರಿಷ್ಠಾಧಿಕಾರಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳೂ ಸಹ ಸಭೆಯಲ್ಲಿ ಉಪಸ್ಥಿತರಿದ್ದರು.
ಸೂಕ್ಷ್ಮ ಗಡಿ ಪ್ರದೇಶಗಳಲ್ಲಿನ ಸದ್ಯದ ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡುವ ಮೂಲಕ ಮತ್ತು ಕಾನೂನು ಜಾರಿಯನ್ನು ಸುಧಾರಿಸುವ ಕ್ರಮಗಳನ್ನು ಗುರುತಿಸುವ ಮೂಲಕ ದೇಶದ ಗಡಿ ಭದ್ರತಾ ವ್ಯವಸ್ಥೆಯನ್ನು ಬಲಪಡಿಸಲು ಸಭೆಯಲ್ಲಿ ಅಮಿತ್ ಶಾ ಸೂಚಿಸಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಮೂವರ ಶೂಟೌಟ್ ಕೇಸ್: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ

