AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಗೃಹ ಸಚಿವ ಅಮಿತ್ ಶಾ ತೀರ್ಥ ಸ್ನಾನ

ಮಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಗೃಹ ಸಚಿವ ಅಮಿತ್ ಶಾ ತೀರ್ಥ ಸ್ನಾನ

ಸುಷ್ಮಾ ಚಕ್ರೆ
|

Updated on: Jan 27, 2025 | 3:40 PM

Share

ಪ್ರಯಾಗರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಪುರಿ ಶಂಕರಾಚಾರ್ಯ ಮತ್ತು ದ್ವಾರಕಾ ಶಂಕರಾಚಾರ್ಯ ಸೇರಿದಂತೆ ಹಲವಾರು ಸಂತರನ್ನು ಭೇಟಿಯಾದರು. ಮಹಾಕುಂಭ ಮೇಳ ಜನವರಿ 13ರಂದು ಪ್ರಾರಂಭವಾಯಿತು ಮತ್ತು ಫೆಬ್ರವರಿ 26ರವರೆಗೆ ನಡೆಯಲಿದೆ. ಮಹಾಕುಂಭ ಮೇಳದ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ವಿಶ್ವದ ಅತಿದೊಡ್ಡ ಧಾರ್ಮಿಕ ಸಭೆಗಳಲ್ಲಿ ಒಂದಾದ ಉತ್ತರ ಪ್ರದೇಶದ ಪ್ರಯಾಗರಾಜ್‌ಗೆ ತಲುಪಿದರು. ಅವರನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯ ಸಂಪುಟ ಸಚಿವರು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.

ಪ್ರಯಾಗರಾಜ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಪ್ರಯಾಗರಾಜ್‌ನಲ್ಲಿ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮವಾದ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಸಚಿವ ಅಮಿತ್ ಶಾ ಅವರೊಂದಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಹಲವಾರು ಸಂತರು ಕೂಡ ಉಪಸ್ಥಿತರಿದ್ದರು. ಜೋರಾಗಿ ಮಂತ್ರ ಪಠಣಗಳ ನಡುವೆ ಅಮಿತ್ ಶಾ ಸ್ನಾನ ಮಾಡಿದ್ದಾರೆ. ಮಹಾಕುಂಭ ಮೇಳವು ವಿಶ್ವದ ಅತಿದೊಡ್ಡ ಮತ್ತು ಅತ್ಯಂತ ಮಹತ್ವದ ಧಾರ್ಮಿಕ ಸಭೆಗಳಲ್ಲಿ ಒಂದಾಗಿದೆ. ಮಹಾಕುಂಭ ಮೇಳ ಜನವರಿ 13ರಂದು ಪ್ರಾರಂಭವಾಯಿತು ಮತ್ತು ಫೆಬ್ರವರಿ 26ರವರೆಗೆ ನಡೆಯಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ