ಮಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಗೃಹ ಸಚಿವ ಅಮಿತ್ ಶಾ ತೀರ್ಥ ಸ್ನಾನ

Updated on: Jan 27, 2025 | 3:40 PM

ಪ್ರಯಾಗರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಪುರಿ ಶಂಕರಾಚಾರ್ಯ ಮತ್ತು ದ್ವಾರಕಾ ಶಂಕರಾಚಾರ್ಯ ಸೇರಿದಂತೆ ಹಲವಾರು ಸಂತರನ್ನು ಭೇಟಿಯಾದರು. ಮಹಾಕುಂಭ ಮೇಳ ಜನವರಿ 13ರಂದು ಪ್ರಾರಂಭವಾಯಿತು ಮತ್ತು ಫೆಬ್ರವರಿ 26ರವರೆಗೆ ನಡೆಯಲಿದೆ. ಮಹಾಕುಂಭ ಮೇಳದ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ವಿಶ್ವದ ಅತಿದೊಡ್ಡ ಧಾರ್ಮಿಕ ಸಭೆಗಳಲ್ಲಿ ಒಂದಾದ ಉತ್ತರ ಪ್ರದೇಶದ ಪ್ರಯಾಗರಾಜ್‌ಗೆ ತಲುಪಿದರು. ಅವರನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯ ಸಂಪುಟ ಸಚಿವರು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.

ಪ್ರಯಾಗರಾಜ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಪ್ರಯಾಗರಾಜ್‌ನಲ್ಲಿ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮವಾದ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಸಚಿವ ಅಮಿತ್ ಶಾ ಅವರೊಂದಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಹಲವಾರು ಸಂತರು ಕೂಡ ಉಪಸ್ಥಿತರಿದ್ದರು. ಜೋರಾಗಿ ಮಂತ್ರ ಪಠಣಗಳ ನಡುವೆ ಅಮಿತ್ ಶಾ ಸ್ನಾನ ಮಾಡಿದ್ದಾರೆ. ಮಹಾಕುಂಭ ಮೇಳವು ವಿಶ್ವದ ಅತಿದೊಡ್ಡ ಮತ್ತು ಅತ್ಯಂತ ಮಹತ್ವದ ಧಾರ್ಮಿಕ ಸಭೆಗಳಲ್ಲಿ ಒಂದಾಗಿದೆ. ಮಹಾಕುಂಭ ಮೇಳ ಜನವರಿ 13ರಂದು ಪ್ರಾರಂಭವಾಯಿತು ಮತ್ತು ಫೆಬ್ರವರಿ 26ರವರೆಗೆ ನಡೆಯಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More