AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಬ್ರುವರಿ 11 ರಂದು ಪುತ್ತೂರಿಗೆ ಆಗಮಿಸಲಿರುವ ಅಮಿತ್ ಶಾ, ಒಂದು ಲಕ್ಷ ಜನರನ್ನು ಸೇರಿಸುವ ಗುರಿ ಸ್ಥಳೀಯ ಬಿಜೆಪಿ ನಾಯಕರಿಗೆ

ಫೆಬ್ರುವರಿ 11 ರಂದು ಪುತ್ತೂರಿಗೆ ಆಗಮಿಸಲಿರುವ ಅಮಿತ್ ಶಾ, ಒಂದು ಲಕ್ಷ ಜನರನ್ನು ಸೇರಿಸುವ ಗುರಿ ಸ್ಥಳೀಯ ಬಿಜೆಪಿ ನಾಯಕರಿಗೆ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Feb 09, 2023 | 12:26 PM

Share

ಕಾರ್ಯಕ್ರಮಕ್ಕೆ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸುವ ಗುರಿಯನ್ನು ಕರಾವಳಿ ಭಾಗದ ಬಿಜೆಪಿ ನಾಯಕರು ಇಟ್ಟುಕೊಂಡಿದ್ದಾರೆ. ಕಾರ್ಯಕ್ರಮದ ನೆಪದಲ್ಲಿ ಮತಬೇಟೆ ನಡೆಸುವ ಯೋಜನೆ ಅವರದ್ದು.

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಉತ್ತರ ಮತ್ತು ಮಧ್ಯ ಕರ್ನಾಟಕ ಭೇಟಿ ನೀಡಿದ್ದಾಯ್ತು. ಈಗ ಉಳಿದಿರೋದು ದಕ್ಷಿಣ ಕರ್ನಾಟಕ ಮತ್ತು ಕರಾವಳಿ ಕರ್ನಾಟಕ (coastal Karnataka). ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಪ್ರಧಾನಿಗಳಷ್ಟು ಜನಪ್ರಿಯರಲ್ಲದಿದ್ದರೂ ಒಬ್ಬ ಮಾಸ್ ಲೀಡರ್ ಆಗಿರುವುದರಿಂದ ಜನರನ್ನು ಸೆಳೆಯುತ್ತಾರೆ. ಮಂಗಳೂರಿನ ಪುತ್ತೂರಿನಲ್ಲಿ ಫೆಬ್ರವರಿ 11 ರಂದ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಸಮಾರಂಭ ಜರುಗಲಿದ್ದು ಮುಖ್ಯ ಅತಿಥಿಗಳಾಗಿ ಅಮಿತ್ ಶಾ ಆಗಮಿಸಲಿದ್ದಾರೆ. ಕಾರ್ಯಕ್ರಮಕ್ಕೆ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸುವ ಗುರಿಯನ್ನು ಕರಾವಳಿ ಭಾಗದ ಬಿಜೆಪಿ ನಾಯಕರು ಇಟ್ಟುಕೊಂಡಿದ್ದಾರೆ. ಕಾರ್ಯಕ್ರಮದ ನೆಪದಲ್ಲಿ ಮತಬೇಟೆ ನಡೆಸುವ ಯೋಜನೆ ಅವರದ್ದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 09, 2023 12:25 PM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.