ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಡಾ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?

Updated on: Sep 13, 2024 | 10:26 PM

ಗೃಹಸಚಿವ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಸಂಪುಟ ಉಪಸಮಿತಿ ಸಭೆ ಮಾಡಲಾಗಿದೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಯಾವುದನ್ನೂ ನಾವು ಸುಮ್ಮನೆ ಬಿಡಲ್ಲ. ಬಂದು​​ ಗತಿ ಕಾಣಿಸುತ್ತೇವೆ ಎಂದು ಹೇಳಿದ್ದಾರೆ. ವಿಪಕ್ಷ ನಾಯಕರ ವಿರುದ್ಧ ನಾವು ದ್ವೇಷದ ರಾಜಕಾರಣ ಮಾಡುತ್ತಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್ 13: ಸಚಿವ ಸಂಪುಟ ಉಪಸಮಿತಿ ಸಭೆ ನಂತರ ವಿಧಾನಸೌಧದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwara) ಪ್ರತಿಕ್ರಿಯಿಸಿದ್ದು, ಮುಡಾ ಪ್ರಕರಣದ ಮುಂಚೆಯೇ ಹಳೇ ಕೇಸ್‌ಗಳ ತನಿಖೆ ನಡೆಯುತ್ತಿದೆ. ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇವೆ. ಯಾವುದನ್ನೂ ನಾವು ಸುಮ್ಮನೆ ಬಿಡಲ್ಲ. ಬಂದು​​ ಗತಿ ಕಾಣಿಸುತ್ತೇವೆ ಎಂದು ಹೇಳಿದ್ದಾರೆ. ವಿಪಕ್ಷ ನಾಯಕರ ವಿರುದ್ಧ ನಾವು ದ್ವೇಷದ ರಾಜಕಾರಣ ಮಾಡುತ್ತಿಲ್ಲ. ಗುಪ್ತಚರಕ್ಕೆ ನಿಂಬಾಳ್ಕರ್ ವರ್ಗಾವಣೆ ವಿಚಾರವಾಗಿ ಮಾತನಾಡಿದ್ದು, ಅದು ಮುಖ್ಯಮಂತ್ರಿಗಳ ತೀರ್ಮಾನ. ಯಾರ ಮೇಲೆ ಆತ್ಮವಿಶ್ವಾಸ ಇದೆ ಅವನ್ನು ಮಾಡಿರುತ್ತಾರೆ. ಮುಖ್ಯಮಂತ್ರಿಗಳ ಬಳಿಯೇ ಗುಪ್ತಚರ ಇದೆ. ನನ್ನ ಬಳಿಯೂ ಚರ್ಚೆ ಮಾಡಿದ್ದರು ಎಂದಿದ್ದಾರೆ.

ವರದಿ: ಈರಣ್ಣ ಬಸವರಾಜು

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More