ತಾಳ್ಮೆ ಕಳೆದುಕೊಳ್ಳದ ಜಿ ಪರಮೇಶ್ವರ್ ಸ್ವಭಾವಕ್ಕೆ ವ್ಯತಿರಿಕ್ತವಾಗಿ ವೇದಿಕೆಯ ಮೇಲೆಯೇ ಅಧಿಕಾರಿಯೊಬ್ಬರನ್ನು ಗದರಿದರು!

ತಾಳ್ಮೆ ಕಳೆದುಕೊಳ್ಳದ ಜಿ ಪರಮೇಶ್ವರ್ ಸ್ವಭಾವಕ್ಕೆ ವ್ಯತಿರಿಕ್ತವಾಗಿ ವೇದಿಕೆಯ ಮೇಲೆಯೇ ಅಧಿಕಾರಿಯೊಬ್ಬರನ್ನು ಗದರಿದರು!
|

Updated on: Oct 31, 2023 | 4:50 PM

ಅಧಿಕಾರಿಯನ್ನು ಕರೆಯುವ ಪ್ರಯತ್ನದಲ್ಲಿ ಇನ್ನೊಬ್ಬ ಅಧಿಕಾರಿ ವಿಫಲರಾಗುತ್ತಾರೆ. ಹಾಗಾಗೇ, ಪರಮೇಶ್ವರ್ ತಾಳ್ಮೆ ಕಳೆದುಕೊಳ್ಳಲಾರಂಭಿಸಿರುತ್ತಾರೆ. ಅನುಪಸ್ಥಿತ ಅಧಿಕಾರಿಯ ಪರವಾಗಿ ವೇದಿಕೆಯ ಮೇಲಿದ್ದ ಅಧಿಕಾರಿ ಏನೋ ಸಮಜಾಯಿಷಿ ನೀಡಲು ಪ್ರಯತ್ನಿಸಿದಾಗ ಸಚಿವರಿಗೆ ರೇಗುತ್ತದೆ. ಎಲ್ಲರೆದುರೇ ಅಧಿಕಾರಿಗೆ ‘ವ್ಹಾಟ್ ನಾನ್ಸೆನ್ಸ್ ಆರ್ ಯೂ ಟಾಕಿಂಗ್!’ ಅಂತ ಗದರುತ್ತಾರೆ.

ತುಮಕೂರು: ಗೃಹ ಸಚಿವ ಜಿ ಪರಮೇಶ್ವರ್ (G Parameshwara) ನೇರನುಡಿಗೆ ಹೆಸರಾದವರು, ಅದು ಸಚಿವ ಸಂಪುಟ ಸಭೆಯಾಗಿರಲಿ (cabinet meeting), ತಮ್ಮ ಇಲಾಖೆಯ ಅಧಿಕಾರಿಗಳೊಂದಿಎಗ ಚರ್ಚೆ ನಡೆಸುತ್ತಿರಲಿ, ಕೆಡಿಪಿ ಮೀಟಿಂಗ್ ಇಲ್ಲವೇ ಜನತಾ ದರ್ಶನ (Janata Darshan) ಕಾರ್ಯಕ್ರಮವಾಗಿರಲಿ- ಹೇಳಬೇಕಿರುವುದನ್ನು ನೇರವಾಗಿ ಹೇಳುತ್ತಾರೆ. ಇದನ್ನು ಮತ್ತೊಮ್ಮೆ ಯಾಕೆ ಹೇಳಬೇಕಿದೆಯೆಂದರೆ, ಅವರು ಇಂದು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗದಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಿ ಜನರ ಕುಂದು ಕೊರತೆಗಳನ್ನು ಆಲಿಸಿ ಸಂಬಂಧಪಟ್ಟ ಅಧಿಕಾರಿಗಳಿಂದ ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸುವ ಪ್ರಯತ್ನ ಮಾಡಿದರು. ಒಂದು ಸಂದರ್ಭದಲ್ಲಿ ಅವರಿಗೆ ಯಾವುದೋ ಅಂಶದ ಬಗ್ಗೆ ಕ್ಲ್ಯಾರಿಟಿ ಬೇಕಿತ್ತು. ಅದಕ್ಕೆ ಸಂಬಂಧಪಟ್ಟ ಅಧಿಕಾರಿ ಸ್ಥಳದಲ್ಲಿರಲಿಲ್ಲ. ಆ ಅಧಿಕಾರಿಯನ್ನು ಕರೆಯುವ ಪ್ರಯತ್ನದಲ್ಲಿ ಇನ್ನೊಬ್ಬ ಅಧಿಕಾರಿ ವಿಫಲರಾಗುತ್ತಾರೆ. ಹಾಗಾಗೇ, ಪರಮೇಶ್ವರ್ ತಾಳ್ಮೆ ಕಳೆದುಕೊಳ್ಳಲಾರಂಭಿಸಿರುತ್ತಾರೆ. ಅನುಪಸ್ಥಿತ ಅಧಿಕಾರಿಯ ಪರವಾಗಿ ವೇದಿಕೆಯ ಮೇಲಿದ್ದ ಅಧಿಕಾರಿ ಏನೋ ಸಮಜಾಯಿಷಿ ನೀಡಲು ಪ್ರಯತ್ನಿಸಿದಾಗ ಸಚಿವರಿಗೆ ರೇಗುತ್ತದೆ. ಎಲ್ಲರೆದುರೇ ಅಧಿಕಾರಿಗೆ ‘ವ್ಹಾಟ್ ನಾನ್ಸೆನ್ಸ್ ಆರ್ ಯೂ ಟಾಕಿಂಗ್!’ ಅಂತ ಗದರುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ