ಸಿಟಿ ರವಿ ಬಂಧನದ ಬಗ್ಗೆ ಪ್ರಶ್ನೆ ಕೇಳಿದಾಗ ಗೃಹ ಸಚಿವ ಪರಮೇಶ್ವರ್ ಪ್ರಕರಣ ಕೋರ್ಟ್ ಮುಂದಿದೆ ಎಂದರು!

ಅರುಣ್​ ಕುಮಾರ್​ ಬೆಳ್ಳಿ

Updated on: Dec 21, 2024 | 11:24 AM

ಸಿಟಿ ರವಿಯವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಅವಹೇಳನಕಾರಿ ಪದ ಬಳಸಿದರು ಎನ್ನಲಾಗಿರುವ ಅರೋಪಿತ ಪ್ರಸಂಗ ಮೇಲ್ಮನೆಯಲ್ಲಿ ನಡೆಯಿತಾ ಅಥವಾ ಸದನವನ್ನು ಸಭಾಪತಿಗಳು ಮುಂದೂಡಿದ ಬಳಿಕ ಹೊರಭಾಗದಲ್ಲಿ ನಡೆಯಿತೋ ಅನ್ನೋದು ಇನ್ನೂ ಖಚಿತಪಟ್ಟಿಲ್ಲ, ಕೆಲವರು ಸದನದ ಒಳಗಡೆ ನಡೆಯಿತು ಎನ್ನುತ್ತಾರೆ , ಕೆಲವರು ಹೊರಗಡೆ ಅನ್ನುತ್ತಾರೆ ಎಂದು ಪರಮೇಶ್ವರ್ ಹೇಳಿದರು.

ಬೆಂಗಳೂರು: ಸರ್ಕಾರ ಬ್ಯಾಕ್​ಫುಟ್​ನಲ್ಲಿದ್ದಾಗ ರಕ್ಷಣೆಗಾಗಿ ಅದರ ಪ್ರತಿನಿಧಿಗಳಿಗೆ ಸಿಗುವ ಅಸ್ತ್ರವೆಂದರೆ, ಪ್ರಕರಣ ಕೋರ್ಟ್ ಮುಂದಿದೆ, ಹಾಗಾಗಿ ಪ್ರತಿಕ್ರಿಯೆ ನೀಡಲಾಗಲ್ಲ ಅಂತ ಹೇಳಿ ಜಾರಿಕೊಳ್ಳೋದು. ಇವತ್ತು ನಗರದಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಸಿಟಿ ರವಿ ಬಂಧನ ಮತ್ತು ಹಲ್ಲೆಗೆ ಸಂಬಂಧಿಸಿದ ಪ್ರಶ್ನೆ ಕೇಳಿದಾಗ ಅವರಲ್ಲಿ ಉತ್ತರವಿರಲಿಲ್ಲ. ಈಗ ವಿಷಯ ನ್ಯಾಯಲಯದ ಮುಂದಿರುವುದರಿಂದ ಚರ್ಚೆ ಮಾಡೋದು ಸರಿಯಲ್ಲ ಎಂದು ಹೇಳಿದರು. ರವಿ ಅವರ ಬಿಡುಗಡೆ ಕೋರ್ಟ್ ತೆಗೆದುಕೊಂಡಿರುವ ತೀರ್ಮಾನ ಎಂದು ಸಚಿವ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸಿಟಿ ರವಿ ಬಂಧನ; ಎಲ್ಲ ವಿಷಯಗಳನ್ನು ಮಾಧ್ಯಮಗಳ ಮುಂದೆ ಹೇಳಲಾಗಲ್ಲ: ಜಿ ಪರಮೇಶ್ವರ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.