‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಜಿ. ಪರಮೇಶ್ವರ್

Updated on: Nov 21, 2024 | 5:54 PM

ಸದ್ಯಕ್ಕೆ ದರ್ಶನ್​ ಅವರು ಚಿಕಿತ್ಸೆಯ ಸಲುವಾಗಿ ಜಾಮೀನು ಪಡೆದಿದ್ದಾರೆ. ಆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಮಾತನಾಡಿದ್ದಾರೆ. ‘ಜಾಮೀನು ಅವಧಿ ಮುಗಿದ ಬಳಿಕ ದರ್ಶನ್ ಜೈಲಿಗೆ ಹೋಗಬೇಕಾಗುತ್ತದೆ. ಮತ್ತೆ ಅವರು ಜಾಮೀನು ಕೇಳುತ್ತಾರೇನೋ ಗೊತ್ತಿಲ್ಲ. ಅವರಿಗೆ ಜಾಮೀನು ಕೊಡಬಾರದು ಅಂತ ನಾವು ಸುಪ್ರೀಂ ಕೋರ್ಟ್​ನಲ್ಲಿ ಮನವಿ ಮಾಡುತ್ತೇವೆ’ ಎಂದು ಜಿ. ಪರಮೇಶ್ವರ್ ಹೇಳಿದ್ದಾರೆ.

ಸದ್ಯಕ್ಕೆ ದರ್ಶನ್​ ಅವರು ಚಿಕಿತ್ಸೆಯ ಸಲುವಾಗಿ ಜಾಮೀನು ಪಡೆದಿದ್ದಾರೆ. ಆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಮಾತನಾಡಿದ್ದಾರೆ. ‘ಜಾಮೀನು ಅವಧಿ ಮುಗಿದ ಬಳಿಕ ದರ್ಶನ್ ಜೈಲಿಗೆ ಹೋಗಬೇಕಾಗುತ್ತದೆ. ಮತ್ತೆ ಅವರು ಜಾಮೀನು ಕೇಳುತ್ತಾರೇನೋ ಗೊತ್ತಿಲ್ಲ. ಅವರಿಗೆ ಜಾಮೀನು ಕೊಡಬಾರದು ಅಂತ ನಾವು ಸುಪ್ರೀಂ ಕೋರ್ಟ್​ನಲ್ಲಿ ಮನವಿ ಮಾಡುತ್ತೇವೆ. ಆ ಪ್ರಕ್ರಿಯೆ ನಡೆದಿದೆ. ಇನ್ನೂ ಕೆಲವು ಸಾಕ್ಷಿ ಕಲೆ ಹಾಕುವುದು ಬಾಕಿ ಇದೆ. ತನಿಖೆ ಪೂರ್ಣಗೊಂಡ ಬಳಿಕ ಅಡಿಷ್ನಲ್ ಚಾರ್ಜ್​ಶೀಟ್ ಸಲ್ಲಿಕೆ ಆಗುತ್ತದೆ’ ಎಂದು ಜಿ. ಪರಮೇಶ್ವರ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More