ಸಿದ್ಧಗಂಗಾ ಮಠದಲ್ಲಿ ಶಿವಕುಮಾರ ಶ್ರೀಗಳ ಗದ್ದುಗೆಗೆ ನಮಿಸಿ ಸಿದ್ಧಲಿಂಗ ಶ್ರೀಗಳ ಆಶೀರ್ವಾದ ಪಡೆದ ಪರಮೇಶ್ವರ್

ಅರುಣ್​ ಕುಮಾರ್​ ಬೆಳ್ಳಿ

Updated on: Apr 10, 2025 | 12:14 PM

ತುಮಕೂರು ಜಿಲ್ಲೆಯ ಹಲವು ಭಾಗಗಳಲ್ಲಿ ಎತ್ತಿನಹೊಳೆ ನೀರಾವರಿ ಯೋಜನೆಯ ಕೆಲಸ ನಡೆಯುತ್ತಿದೆ, ಕೊರಟಗೆರೆ ಕ್ಷೇತ್ರದಲ್ಲಿ 69 ಕೆರೆಗಳಿಗೆ ನೀರು ತುಂಬಿಸಲು ಅನುಮೋದನೆ ಸಿಕ್ಕಿದೆ, ಶೀಘ್ರದಲ್ಲಿ ಕೆಲಸ ಆರಂಭವಾಗಲಿದೆ ಎಂದು ಪರಮೇಶ್ವರ್ ಶ್ರೀಗಳಿಗೆ ಹೇಳಿದರು. ಜೋನಲ್ ಬ್ಯಾಲೆನ್ಸಿಂಗ್ ರಿಜರ್ವಾಯರ್ ಮೂಲಕ ಪಾವಗಢ ತಾಲ್ಲೂಕಿನ ನೀರಿನ ಸಮಸ್ಯೆ ಬಗೆಹರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶ್ರೀಗಳ ಗಮನಕ್ಕೆ ತಂದರು.

ತುಮಕೂರು, ಏಪ್ರಿಲ್ 10: ಗೃಹ ಸಚಿವ ಜಿ ಪರಮೇಶ್ವರ್ ಇಂದು ಜಿಲ್ಲೆಯ ಸಿದ್ಧಗಂಗಾ ಮಠಕ್ಕೆ (Siddaganga mutt) ಭೇಟಿ ನೀಡಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಗಳಿಗೆ ನಮಸ್ಕರಿದ್ದಲ್ಲದೆ ಸುಮಾರು ಹೊತ್ತು ಶ್ರೀಗಳ ಜೊತೆ ಕೂತು ಹಲವಾರು ವಿಷಯಗಳು ಅದರಲ್ಲೂ ಮುಖ್ಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆರೋಗ್ಯ ಮತ್ತು ನೀರಾವರಿ ಯೋಜನೆಗಳ ಬಗ್ಗೆ ಮಾತಾಡಿದರು. ಸ್ವಾಮೀಜಿಯವರು ಸಿದ್ದರಾಮಯ್ಯನವರ ಮಂಡಿನೋವಿನ ಬಗ್ಗೆ ಕೇಳಿದಾಗ, ಸಾಕಷ್ಟು ಸುಧಾರಿಸಿಕೊಂಡಿದ್ದಾರೆ, ಕೊಂಚ ನೋವಿದೆ, ಸಂಪೂರ್ಣವಾಗಿ ಗುಣಮುಖರಾಗಲು ಮೂರ್ನಾಲ್ಕು ತಿಂಗಳು ಬೇಕು ಎಂದು ಪರಮೇಶ್ವರ್ ಹೇಳಿದರು.

ಇದನ್ನೂ ಓದಿ:  ದೊಡ್ಡ ನಗರದಲ್ಲಿ ಇಂತಹ ಘಟನೆಗಳು ನಡೆಯುತ್ತವೆ: ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಪರಮೇಶ್ವರ್

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.