ದರ್ಶನ್ ಬಗ್ಗೆ ಪ್ರಶ್ನೆ ಕೇಳಿಸಿಕೊಳ್ಳುವುದು ಗೃಹಸಚಿವ ಪರಮೇಶ್ವರ್​ಗೆ ಈಗಲೂ ಇಷ್ಟವಾಗುತ್ತಿಲ್ಲ!

ಅರುಣ್​ ಕುಮಾರ್​ ಬೆಳ್ಳಿ

Updated on: Aug 28, 2024 | 12:20 PM

ನಗರದ ಸೆಂಟ್ರಲ್ ಜೈಲಿನಲ್ಲಿ ದರ್ಶನ್ ಕೆಲ ನಟೋರಿಯಸ್ ಅಪರಾಧಿಗಳೊಂದಿಗೆ ಸಿಗರೇಟು ಸೇದುತ್ತ ಹರಟೆ ಹೊಡೆಯುತ್ತಿದ್ದ ಪೋಟೋ ಹೊರಬಿದ್ದ ನಂತರ ಜಿಪರಮೇಶ್ವರ್ ವಿಚಲಿತರಾಗಿದ್ದು ಸುಳ್ಳಲ್ಲ. ಕೂಡಲೇ ಕಾರ್ಯಪ್ರವೃತ್ತರಾಗಿ ಅವರು 9 ಜೈಲು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದರು.

ಬೆಂಗಳೂರು: ಕೊಲೆ ಆರೋಪಿ ದರ್ಶನ್ ಬಗ್ಗೆ ಪ್ರಶ್ನೆ ಕೇಳಿದರೆ ಗೃಹಸಚಿವ ಜಿ ಪರಮೇಶ್ವರ್ ಅವರಿಗೆ ಈಗಲೂ ಇರುಸು ಮುರುಸು ಉಂಟಾಗುತ್ತಿದೆ. ದರ್ಶನ್ ರನ್ನು ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ, ಇನ್ನೂ ಎಷ್ಟು ಸಲಾಂತ ಅವರ ಬಗ್ಗೆ ಕೇಳುತ್ತೀರಿ, ಒಂದು ವಾರದವರೆಗೆ ಸುದ್ದಿಯನ್ನು ಕವರ್ ಮಾಡಿದ್ದೀರಲ್ಲ ಎಂದು ನಗುತ್ತ ಅವರು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಹೋಮ್ ಮಿನಿಸ್ಟರ್ ಪರಮೇಶ್ವರ್ ಕೋ ಗುಸ್ಸಾ ಕ್ಯೋಂ ಆತಾ ಹೈ? ಫಜೀತಿಗೆ ಸಿಕ್ಕರೆ ಕೋಪ!

Published on: Aug 28, 2024 12:16 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.