Horoscope Today: ಇಂದು ಈ ರಾಶಿಯವರ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳಲಿವೆ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 29, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನದಂದು ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷದ ತ್ರಯೋದಶಿ ಮತ್ತು ಸ್ವಾತಿ ನಕ್ಷತ್ರದ ವಿಶೇಷತೆಯನ್ನು ಹೊಂದಿದೆ. ರಾಹುಕಾಲವು ಬೆಳಗ್ಗೆ 10:40 ರಿಂದ ಮಧ್ಯಾಹ್ನ 12:16ರ ವರೆಗೆ ಇರಲಿದ್ದು, ಶುಭಕಾಲವು ಮಧ್ಯಾಹ್ನ 12:17 ರಿಂದ 1:53ರ ವರೆಗೆ ಇರುತ್ತದೆ.
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 29, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನದಂದು ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷದ ತ್ರಯೋದಶಿ ಮತ್ತು ಸ್ವಾತಿ ನಕ್ಷತ್ರದ ವಿಶೇಷತೆಯನ್ನು ಹೊಂದಿದೆ. ರಾಹುಕಾಲವು ಬೆಳಗ್ಗೆ 10:40 ರಿಂದ ಮಧ್ಯಾಹ್ನ 12:16ರ ವರೆಗೆ ಇರಲಿದ್ದು, ಶುಭಕಾಲವು ಮಧ್ಯಾಹ್ನ 12:17 ರಿಂದ 1:53ರ ವರೆಗೆ ಇರುತ್ತದೆ.
ಇಂದು ಶುಕ್ರವಾರವಾದ್ದರಿಂದ ಶ್ರೀ ಮಹಾಲಕ್ಷ್ಮಿಯ ಆರಾಧನೆಗೆ ಅತ್ಯಂತ ಪ್ರಶಸ್ತವಾದ ದಿನವಾಗಿದೆ. ಮಹಾಲಕ್ಷ್ಮಿಯ ದರ್ಶನ ಅಥವಾ ಕುಂಕುಮಾರ್ಚನೆ ಮಾಡುವುದರಿಂದ ಶುಭವಾಗುತ್ತದೆ. ಗ್ರಹಗಳ ಸ್ಥಾನದ ಕುರಿತು ಹೇಳುವುದಾದರೆ, ಇಂದು ಬೆಳಗ್ಗೆ 11:14ಕ್ಕೆ ಬುಧ ಗ್ರಹವು ವೃಷಭ ರಾಶಿಯಿಂದ ಮಿಥುನ ರಾಶಿಗೆ ಸಂಚರಿಸಲಿದೆ. ಈಗಾಗಲೇ ಗುರು ಮತ್ತು ಶುಕ್ರ ಮಿಥುನ ರಾಶಿಯಲ್ಲಿ ಇರುವುದರಿಂದ, ಬುಧ ಗ್ರಹದ ಸೇರ್ಪಡೆ ವಿಶೇಷ ಮಹತ್ವವನ್ನು ಪಡೆದಿದೆ ಎಂದು ಗುರೂಜಿ ಹೇಳಿದ್ದಾರೆ.
