AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ

Horoscope Today: ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ

ಭಾವನಾ ಹೆಗಡೆ
|

Updated on: Jul 03, 2026 | 6:42 AM

Share

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜುಲೈ 03, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವನಾಮ ಸಂವತ್ಸರ, ಜೇಷ್ಠ ಮಾಸ, ಕೃಷ್ಣಪಕ್ಷ ತದಿಗೆ, ಶ್ರವಣ ನಕ್ಷತ್ರದಲ್ಲಿ ಚಂದ್ರನ ಸಂಚಾರ ಹಾಗೂ ಶುಕ್ರವಾರದ ಮಹಾಲಕ್ಷ್ಮಿ ಕೃಪೆಗೆ ಪಾತ್ರರಾಗುವ ಮಹತ್ವವನ್ನು ಅವರು ತಿಳಿಸಿದರು. ಇಂದು ಸಂಕಷ್ಟ ಚತುರ್ಥಿ, ಕೊಳ್ಳೇಗಾಲ ಸುಬ್ರಮಣ್ಯ ಸ್ವಾಮಿ ವರ್ಧಂತೋತ್ಸವ ಮತ್ತು ಮೈಸೂರಿನ ತಿಲಕ್ ನಗರ ಶ್ರೀನಿವಾಸ ಉತ್ಸವದಂತಹ ವಿಶೇಷ ದಿನಗಳು ಇವೆ ಎಂದು ಗುರುತಿಸಲಾಗಿದೆ.

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜುಲೈ 03, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವನಾಮ ಸಂವತ್ಸರ, ಜೇಷ್ಠ ಮಾಸ, ಕೃಷ್ಣಪಕ್ಷ ತದಿಗೆ, ಶ್ರವಣ ನಕ್ಷತ್ರದಲ್ಲಿ ಚಂದ್ರನ ಸಂಚಾರ ಹಾಗೂ ಶುಕ್ರವಾರದ ಮಹಾಲಕ್ಷ್ಮಿ ಕೃಪೆಗೆ ಪಾತ್ರರಾಗುವ ಮಹತ್ವವನ್ನು ಅವರು ತಿಳಿಸಿದರು. ಇಂದು ಸಂಕಷ್ಟ ಚತುರ್ಥಿ, ಕೊಳ್ಳೇಗಾಲ ಸುಬ್ರಮಣ್ಯ ಸ್ವಾಮಿ ವರ್ಧಂತೋತ್ಸವ ಮತ್ತು ಮೈಸೂರಿನ ತಿಲಕ್ ನಗರ ಶ್ರೀನಿವಾಸ ಉತ್ಸವದಂತಹ ವಿಶೇಷ ದಿನಗಳು ಇವೆ ಎಂದು ಗುರುತಿಸಲಾಗಿದೆ.

ಮೇಷ ರಾಶಿಯವರಿಗೆ ನಾಲ್ಕು ಗ್ರಹಗಳ ಶುಭ ಫಲವಿದ್ದು, ಆರ್ಥಿಕವಾಗಿ ಉತ್ತಮ ದಿನವಾಗಿದೆ. ವೃಷಭ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಹಳೆ ಬಾಕಿ ವಸೂಲಿಯಾಗಿ, ಅರ್ಧಂಬರ್ಧ ಕೆಲಸಗಳು ಪೂರ್ಣಗೊಳ್ಳುತ್ತವೆ. ಮಿಥುನ ರಾಶಿಯವರಿಗೆ ನಾಲ್ಕು ಗ್ರಹಗಳ ಶುಭಫಲವಿರುವ ಈ ದಿನ ಆರ್ಥಿಕವಾಗಿ ಉತ್ತಮವಾಗಿದ್ದು, ಋಣಮುಕ್ತರಾಗುವ ಸಾಧ್ಯತೆ ಇದೆ. ಕರ್ಕಾಟಕ ರಾಶಿಯವರು ಮಾತಿನಲ್ಲಿ ಜಾಗ್ರತೆ ವಹಿಸಬೇಕಾಗಿದ್ದು, ಹೊಸ ವ್ಯಾಪಾರ ಮತ್ತು ಉದ್ದಿಮೆಗಳಿಗೆ ಶುಭದಿನವಾಗಿದೆ.

Follow Us