ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್ಟೇಬಲ್ ಕಾರು: ಭೀಕರ ದೃಶ್ಯ ಸೆರೆ
ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ರಸ್ತೆ ಗುಡಿಸುತ್ತಿದ್ದ ಜ್ಞಾನಬಾಯಿ ಎಂಬ ಮಹಿಳೆಯ ಮೇಲೆ ಪೊಲೀಸ್ ಕಾನ್ಸ್ಟೇಬಲ್ ಕಾರು ಹರಿದಿದೆ. ಗಂಭೀರವಾಗಿ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದು, ಅಪಘಾತದ ಮತ್ತು ಸ್ಥಳದಲ್ಲಿದ್ದ ಬಾಲಕನ ಆಕ್ರಂದನದ ಕರುಳು ಹಿಂಡುವಂತಿರುವ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಬೀದರ್, ಏಪ್ರಿಲ್ 03: ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಪೊಲೀಸ್ ಕಾನ್ಸ್ಟೇಬಲ್ ಕಾರು ಹರಿದಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ನಡೆದಿದೆ. ಅಪಘಾತದಲ್ಲಿ ಭಾಲ್ಕಿ ಪಟ್ಟಣದ ನಿವಾಸಿ ಜ್ಞಾನಬಾಯಿ(45) ಸ್ಥಿತಿ ಗಂಭೀರವಾಗಿದ್ದು, ಪಟ್ಟಣದ ರಸ್ತೆಯಲ್ಲಿ ಕಸ ಗುಡಿಸುತ್ತಿದ್ದ ವೇಳೆ ವೇಗವಾಗಿ ಬಂದ ಮೇಹಕರ್ ಪೊಲೀಸ್ ಠಾಣೆಯ ಪಿಸಿ ಉಮಾಕಾಂತ್ ಕಾರು ಮಹಿಳೆ ಮೇಲೆ ಹರಿದಿದೆ. ಗಂಭೀರ ಗಾಯಗೊಂಡ ಜ್ಞಾನಬಾಯಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಭಾಲ್ಕಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ಮತ್ತು ಸ್ಥಳದಲ್ಲಿದ್ದ ಬಾಲಕನ ಆಕ್ರಂದನದ ಕರುಳು ಹಿಂಡುವಂತಿರುವ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us