7 ಮಂದಿಯ ಬಲಿತೆಗದುಕೊಂಡ ಹೊಸಕೋಟೆ ಅಪಘಾತದ ಭೀಕರತೆ ಬಿಚ್ಚಿಟ್ಟ ಐಜಿ ಲಾಬುರಾಮ್

Edited By:

Updated on: Feb 13, 2026 | 10:58 AM

ಹೊಸಕೋಟೆ-ದಾಬಸ್​​ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ದುರ್ಘಟನೆಯಲ್ಲಿ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕ್ಯಾಂಟರ್, ಬೈಕ್ ಮತ್ತು ಎಕ್ಸ್‌ಯುವಿ ಕಾರು ಒಳಗೊಂಡ ಈ ಅಪಘಾತದ ಕುರಿತು ಐಜಿ ಲಾಬುರಾಮ್ ಅವರು ಪ್ರಾಥಮಿಕ ಮಾಹಿತಿ ನೀಡಿದ್ದಾರೆ.

ದೇವನಹಳ್ಳಿ, ಫೆಬ್ರವರಿ 13: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ-ದಾಬಸ್​​ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಏಳು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ಈ ಅಪಘಾತದ ತೀವ್ರತೆ ಕುರಿತು ಐಜಿ ಲಾಬುರಾಮ್ ಮಾಹಿತಿ ನೀಡಿದ್ದು, ಸ್ಥಳದಿಂದ ವಾಹನಗಳನ್ನು ತೆರವುಗೊಳಿಸಿ, ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರ ಪೈಕಿ ಮೂವರನ್ನು ಗುರುತಿಸಲಾಗಿದ್ದು, ಅವರ ಪೋಷಕರಿಗೆ ಮತ್ತು ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ. ಗುರುತಿಸಲ್ಪಟ್ಟ ಮೂವರು ಬೆಂಗಳೂರಿನ ನಿವಾಸಿಗಳು. ಇನ್ನುಳಿದವರ ಗುರುತು ಪತ್ತೆ ಕಾರ್ಯ ಮುಂದುವರಿದಿದೆ. ಪ್ರಕರಣದ ಕುರಿತು ಮುಂದಿನ ತನಿಖೆ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ