ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!

Edited By:

Updated on: Jun 02, 2026 | 10:29 AM

ಹೊಸಕೋಟೆಯ ಕಣ್ಣೂರಹಳ್ಳಿ ರಸ್ತೆಯಲ್ಲಿ ಒಂದೇ ಸ್ಥಳದಲ್ಲಿ ಪತ್ತೆಯಾದ 23 ನಾಗರಹಾವಿನ ಮರಿಗಳನ್ನು ಉರಗ ತಜ್ಞ ಸಿಎಸ್ ನಾಗಭೂಷಣ ಅವರು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಈ ನಾಗರ ಹಾವಿನ ಮರಿಗಳನ್ನು ಅರಣ್ಯಕ್ಕೆ ಬಿಡಲು ಸಿದ್ಧತೆ ನಡೆಸಲಾಗಿದೆ. ಒಂದೇ ಕಡೆ ಪತ್ತೆಯಾದ ನಾಗರ ಹಾವಿನ ಮರಿಗಳ ವಿಡಿಯೋ ಇಲ್ಲಿದೆ.

ದೇವನಹಳ್ಳಿ, ಜೂನ್ 2: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಕಣ್ಣೂರಹಳ್ಳಿ ರಸ್ತೆಯಲ್ಲಿ ಅಚ್ಚರಿಯ ಹಾಗೂ ಆತಂಕದ ಘಟನೆಯೊಂದು ನಡೆದಿದೆ. ಇಲ್ಲಿ ಒಂದೇ ಸ್ಥಳದಲ್ಲಿ ಬರೋಬ್ಬರಿ 23 ನಾಗರಹಾವಿನ ಮರಿಗಳು ಒಟ್ಟಿಗೆ ಪತ್ತೆಯಾಗಿವೆ. ಒಂದೇ ಕಡೆ ಇಷ್ಟೊಂದು ಸಂಖ್ಯೆಯ ಹಾವಿನ ಮರಿಗಳನ್ನು ಕಂಡ ಸ್ಥಳೀಯರು ಕೆಲ ಕಾಲ ತೀವ್ರ ಆತಂಕಕ್ಕೆ ಒಳಗಾಗಿ ಬೆಚ್ಚಿಬಿದ್ದಿದ್ದಾರೆ. ತಕ್ಷಣವೇ ಜಾಗೃತರಾದ ಸಾರ್ವಜನಿಕರು ಸ್ಥಳೀಯ ಉರಗ ತಜ್ಞರಾದ ಸಿ.ಎಸ್. ನಾಗಭೂಷಣ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಉರಗ ತಜ್ಞರು ಹಾವಿನ ಮರಿಗಳನ್ನು ಅತ್ಯಂತ ರಕ್ಷಣೆ ಮಾಡಿದ್ದು, ಹತ್ತಿರದ ಅರಣ್ಯ ಪ್ರದೇಶಕ್ಕೆ ಬಿಡಲು ನಿರ್ಧರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More