MTB’s shocker to Congress: ಹೊಸಕೋಟೆ ಮೂಲ ಕಾಂಗ್ರೆಸ್ಸಿಗರ ಎಚ್ಚರಿಕೆಯನ್ನು ಹಗುರವಾಗಿ ಪರಿಗಣಿಸಿದ ವರಿಷ್ಠರು, ನೂರಾರು ನಾಯಕರು ಬಿಜೆಪಿ ಸೇರ್ಪಡೆ!

Updated on: Feb 14, 2023 | 12:37 PM

ಹಾಗಾಗಿ, ಹೊಸಕೇಟೆಯ ಕಾಂಗ್ರೆಸ್ ನಾಯಕರು ಮಂಗಳವಾರದಂದು ನಾಗರಾಜ್ ಸಮ್ಮುಖದಲ್ಲಿ ಬಿಜೆಪಿ ಸೇರಿದರು. ಮುಸ್ಲಿಂ ಸಮುದಾಯದ ಹಲವಾರು ಮಹಿಳೆಯರು ಸಹ ಇಂದು ಬಿಜೆಪಿ ಸೇರಿದ್ದು ಗಮನಾರ್ಹ ಸಂಗತಿ.

ದೇವನಹಳ್ಳಿ: ಹೊಸಕೋಟೆ (Hoskote) ತಾಲ್ಲೂಕಿನ ಮೂಲ ಕಾಂಗ್ರೆಸ್ಸಿಗರು ಪಕ್ಷದ ತಾರತಮ್ಯ ಧೋರಣೆ ಬಗ್ಗೆ ತೀವ್ರ ಅಸಮಾಧಾನಗೊಂಡಿದ್ದ ಬಗ್ಗೆ ನಾವು ಈಗಾಗಲೇ ವರದಿ ಮಾಡಿದ್ದೇವೆ. ತಮ್ಮ ಜೊತೆ ಪಕ್ಷದ ವರಿಷ್ಠರು (party seniors) ಮಾತುಕತೆ ನಡೆಸದಿದ್ದರೆ ಫೆಬ್ರುವರಿ 14 ರಂದು ಸಚಿವ ಎಮ್ ಟಿ ಬಿ ನಾಗರಾಜ್ (MTB Nagaraj) ಸಮ್ಮುಖದಲ್ಲಿ ಬಿಜೆಪಿ ಸೇರುವುದಾಗಿ ಅಸಂತೃಪ್ತ ನಾಯಕರು ಗಡುವನ್ನು ಸಹ ನೀಡಿದ್ದರು. ಕಾಂಗ್ರೆಸ್ ನಾಯಕರು ಇವರ ಎಚ್ಚರಿಕೆಯನ್ನು ಹಗುರವಾಗಿ ಪರಿಗಣಿಸಿದಂತೆ ಕಾಣುತ್ತದೆ. ಹಾಗಾಗಿ, ಹೊಸಕೋಟೆಯ ಕಾಂಗ್ರೆಸ್ ನಾಯಕರು ಮಂಗಳವಾರದಂದು ನಾಗರಾಜ್ ಸಮ್ಮುಖದಲ್ಲಿ ಬಿಜೆಪಿ ಸೇರಿದರು. ಮುಸ್ಲಿಂ ಸಮುದಾಯದ ಹಲವಾರು ಮಹಿಳೆಯರು ಸಹ ಇಂದು ಬಿಜೆಪಿ ಸೇರಿದ್ದು ಗಮನಾರ್ಹ ಸಂಗತಿ.

ಮತ್ತಷ್ಟು ವಿಡಿಯೋ ಸುದ್ದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 14, 2023 12:28 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More