ಶ್ರೀರಾಂಪುರದಲ್ಲಿ 8 ಗಂಟೆ ಸುತ್ತಾಡಿದ್ರೂ ಸಿಗ್ಲಿಲ್ಲ ಬೆಡ್, ಅಮ್ಮನ ಹೊಟ್ಟೆಯಲ್ಲೇ ಮಗು ಸಾವು..

[lazy-load-videos-and-sticky-control id=”RqWzG14AaAI”] ಬೆಂಗಳೂರು:ಮುಂಜಾನೆ ಮೂರು ಗಂಟೆಯಿಂದಲೂ ಸುತ್ತಾಡಿ ಸುತ್ತಾಡಿ ಗರ್ಭಿಣಿ ಸುಸ್ತಾಗಿದ್ದರು. ಆಸ್ಪತ್ರೆಯಲ್ಲಿ ಬೆಡ್ ಸಿಗದೇ ಅಮ್ಮನ ಹೊಟ್ಟೆಯಲ್ಲಿಯೇ ಮಗು ಸಾವನ್ನಪ್ಪಿರುವ ಘಟನೆ ಇಂದು ನಗರದ ಶ್ರೀರಾಂಪುರದಲ್ಲಿ ನಡೆದಿದೆ. ಶ್ರೀರಾಂಪುರದ ನಿವಾಸಿಯಾಗಿರುವ ಗರ್ಭಿಣಿಗೆ ಮುಂಜಾನೆ ಮೂರು ಗಂಟೆಯಿಂದ ಹೆರಿಗೆ ನೋವು ಕಾಣಿಸಿಕೊಂಡಿದೆ. ಕೂಡಲೇ ಮನೆಯವರು ಗರ್ಭಿಣಿಯನ್ನು ಆಟೋದಲ್ಲಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಬೆಳಗ್ಗೆ ಮೂರು ಗಂಟೆಯಿಂದಲೂ ವಿಕ್ಟೋರಿಯಾ, ವಾಣಿ ವಿಲಾಸ್, ಶ್ರೀರಾಂಪುರ ಸರ್ಕಾರಿ ಆಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆ ಸುತ್ತಾಡಿದ್ರು ಬೆಡ್ ಸಿಗಲಿಲ್ಲ. ಕೊನೆಗೆ ಕೆಸಿ ಜನರಲ್ […]

ಶ್ರೀರಾಂಪುರದಲ್ಲಿ 8 ಗಂಟೆ ಸುತ್ತಾಡಿದ್ರೂ ಸಿಗ್ಲಿಲ್ಲ ಬೆಡ್,  ಅಮ್ಮನ ಹೊಟ್ಟೆಯಲ್ಲೇ ಮಗು ಸಾವು..
ಸಾಧು ಶ್ರೀನಾಥ್​

Updated on: Jul 20, 2020 | 6:40 PM

[lazy-load-videos-and-sticky-control id=”RqWzG14AaAI”]

ಬೆಂಗಳೂರು:ಮುಂಜಾನೆ ಮೂರು ಗಂಟೆಯಿಂದಲೂ ಸುತ್ತಾಡಿ ಸುತ್ತಾಡಿ ಗರ್ಭಿಣಿ ಸುಸ್ತಾಗಿದ್ದರು. ಆಸ್ಪತ್ರೆಯಲ್ಲಿ ಬೆಡ್ ಸಿಗದೇ ಅಮ್ಮನ ಹೊಟ್ಟೆಯಲ್ಲಿಯೇ ಮಗು ಸಾವನ್ನಪ್ಪಿರುವ ಘಟನೆ ಇಂದು ನಗರದ ಶ್ರೀರಾಂಪುರದಲ್ಲಿ ನಡೆದಿದೆ.

ಶ್ರೀರಾಂಪುರದ ನಿವಾಸಿಯಾಗಿರುವ ಗರ್ಭಿಣಿಗೆ ಮುಂಜಾನೆ ಮೂರು ಗಂಟೆಯಿಂದ ಹೆರಿಗೆ ನೋವು ಕಾಣಿಸಿಕೊಂಡಿದೆ. ಕೂಡಲೇ ಮನೆಯವರು ಗರ್ಭಿಣಿಯನ್ನು ಆಟೋದಲ್ಲಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಬೆಳಗ್ಗೆ ಮೂರು ಗಂಟೆಯಿಂದಲೂ ವಿಕ್ಟೋರಿಯಾ, ವಾಣಿ ವಿಲಾಸ್, ಶ್ರೀರಾಂಪುರ ಸರ್ಕಾರಿ ಆಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆ ಸುತ್ತಾಡಿದ್ರು ಬೆಡ್ ಸಿಗಲಿಲ್ಲ.

ಕೊನೆಗೆ ಕೆಸಿ ಜನರಲ್ ಆಸ್ಪತ್ರೆಗೆ ಬರುತ್ತಿದ್ದಂತೆ ಗರ್ಭಿಣಿಗೆ ಆಟೋದಲ್ಲಿಯೇ ಹೆರಿಗೆಯಾಗಿದೆ. ಆದರೆ ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ, ಆರೈಕೆ ಸಿಗದೆ ತಾಯಿ ಗರ್ಭದಲ್ಲೇ ಮಗು ಸಾವನ್ನಪ್ಪಿದೆ. ಆಸ್ಪತ್ರೆಗಳ ನೀರ್ಲಕ್ಷ್ಯತನದಿಂದಲೇ ಮಗು ಬದುಕಲಿಲ್ಲ ಎಂದು ಕುಟುಂಬಸ್ಥರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

Published On - 1:16 pm, Mon, 20 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us