Video: ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ, ರೈತ ಬೆಳೆಗೆ ಹಾನಿ

Updated on: Dec 05, 2025 | 10:27 AM

ಹೊಸೂರಿನ ಶಾನಮಾವು ಬಳಿ ಸುಮಾರು 40ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಾಡಂಚಿನ ಗ್ರಾಮಗಳಲ್ಲಿ ಭತ್ತ, ರಾಗಿ ಸೇರಿದಂತೆ ಹಲವು ಬೆಳೆಗಳನ್ನು ನಾಶಪಡಿಸಿವೆ. ಅರಣ್ಯ ಇಲಾಖೆಯು ಪಟಾಕಿ ಸಿಡಿಸಿ ಆನೆಗಳನ್ನು ಡೆಂಕಣಿಕೋಟೆ ಅರಣ್ಯಕ್ಕೆ ಓಡಿಸುವ ಕಾರ್ಯಾಚರಣೆ ನಡೆಸಿದೆ. ಈ ಆನೆ ಹಾವಳಿಯಿಂದ ರೈತರಿಗೆ ಅಪಾರ ನಷ್ಟ ಉಂಟಾಗಿದೆ.

ಹೊಸೂರು, ಡಿ,5: ರಾಜ್ಯದ ಗಡಿಭಾಗ ತಮಿಳುನಾಡಿನ ಹೊಸೂರು ಸಮೀಪದ ಶಾನಮಾವು ಎಂಬಲ್ಲಿ ಕಾಡಾನೆಗಳ ಹಿಂಡು ಹೋಗುವ ದೃಶ್ಯ ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಸುಮಾರು 40ಕ್ಕೂ ಹೆಚ್ಚು ಕಾಡಾನೆಗಳು ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾಡಿನ ಸಮೀಪ ಇರುವ ಗ್ರಾಮಗಳಿಗೆ ನುಗ್ಗಿ ಬೆಳೆಗಳನ್ನು ಹಾನಿ ಮಾಡಿದೆ. ರೈತರು ಬೆಳೆದಿದ್ದ ರಾಗಿ, ಭತ್ತ, ಟೊಮೆಟೊ, ಬೀನ್ಸ್, ಎಲೆಕೋಸು ಸೇರಿದಂತೆ ಹಲವು ಬೆಳೆಗಳಿಗೆ ಹಾನಿ ಮಾಡಿದೆ. ಇದೀಗ ಆನೆಗಳನ್ನು ಓಡಿಸಲು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿದೆ. ಪಟಾಕಿ ಸಿಡಿಸಿ ಕಾಡಾನೆಗಳನ್ನು ಡೆಂಕಣಿಕೋಟೆ ಅರಣ್ಯಕ್ಕೆ ಓಡಿಸಿದ್ದಾರೆ. ಈ ಬಗ್ಗೆ ಒಂದು ವಿಡಿಯೋ ಇಲ್ಲಿದೆ ನೋಡಿ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Follow Us
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More