Karnataka Assembly Polls; ಮತ ಚಲಾಯಿಸಿ ಬಂದವರಿಗೆ ಹೋಟೆಲ್​ಗಳು ಏನನ್ನೂ ಉಚಿತವಾಗಿ ನೀಡುವಂತಿಲ್ಲ: ಸಹಾಯಕ ಚುನಾವಣಾ ಆಯುಕ್ತ

ಸಂಹಿತೆಯ ಉಲ್ಲಂಘನೆಯಾದಲ್ಲಿ ಹೋಟೆಲ್ ಮಾಲೀಕರನ್ನೇ ಹೊಣೆಗಾರನ್ನಾಗಿಸಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಲಾಗಿದೆ.

ಬೆಂಗಳೂರು: ವೋಟು ಹಾಕಿ ಬಂದವರಿಗೆ ದೋಸೆ ಫ್ರೀ, ತಿಂಡಿ ಫ್ರೀ, ಊಟ ಫ್ರೀ ಅಂತ ತಮ್ಮ ಹೋಟೆಲ್ ಗಳ (hotel) ಮುಂದೆ ಬೋರ್ಡ್ ಬ್ಯಾನರ್ ಗಳನ್ನು ತೂಗು ಹಾಕಿದ್ದ ಮಾಲೀಕರಿಗೆ ಆಘಾತ ಎದುರಾಗಿದೆ. ಹೋಟೆಲ್ ನವರ್ಯಾರೂ ಉಚಿತವಾಗಿ ಏನನ್ನೂ ನೀಡುವಂತಿಲ್ಲ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) ಸಹಾಯಕ ಚುನಾವಣಾ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ಎಚ್ಚರಿಸಿದ್ದಾರೆ. ಚುನಾವಣಾ ನೀತಿ ಸಂಹಿತೆ 20-04-2023 ರಿಂದ 13-05-2023 ರವರೆಗೆ ಜಾರಿಯಲ್ಲಿರುತ್ತದೆ ಎಂದು ಹೇಳಿರುವ ಅವರು ಈ ಅವಧಿಯಲ್ಲಿ ಹೋಟೆಲ್ ಮಾಲೀಕರು ಗ್ರಾಹಕರಿಗೆ ಉಚಿತವಾಗಿ ಊಟ-ತಿಂಡಿ, ಕಾಫಿ ನೀಡಿದರೆ ಅದು ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತದೆ ಎಂದಿದ್ದಾರೆ. ಸಂಹಿತೆಯ ಉಲ್ಲಂಘನೆಯಾದಲ್ಲಿ ಹೋಟೆಲ್ ಮಾಲೀಕರನ್ನೇ ಹೊಣೆಗಾರನ್ನಾಗಿಸಿ ಕ್ರಮ ಜರುಗಿಸಲಾಗುವುದು ಎಂದು ಈಗಾಗಲೇ ಎಲ್ಲ ಹೋಟೆಲ್ ಗಳಿಗೆ ಜಾರಿ ಮಾಡಿರುವ ನೋಟಿಸ್ ನಲ್ಲಿ ಎಚ್ಚರಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us