ಕಸಾಯಿಖಾನೆಗೆ ಒಯ್ಯುತ್ತಿದ್ದ ಕೋಣದ ಆರ್ಭಟಕ್ಕೆ ಮನೆ, ಗೇಟು, ಕಾರು ನಜ್ಜುಗುಜ್ಜು

Edited By:

Updated on: Jun 19, 2024 | 5:12 PM

ಕಸಾಯಿಖಾನೆಗೆ ಒಯ್ಯುತ್ತಿದ್ದ ಕೋಣದ ಆರ್ಭಟಕ್ಕೆ ಮನೆ, ಗೇಟು, ಕಾರು ನಜ್ಜುಗುಜ್ಜಾಗಿದೆ. ಆ ಮೂಲಕ ವಧೆ ಮಾಡಲು ಬಂದವರಿಗೆ ಕೋಣವೇ ಒದೆ ಕೊಟ್ಟಿದೆ. ಇದು ಕೇರಳದ ಕಾಸರಗೋಡಿನಲ್ಲಿ ನಡೆದಿದೆ ಎನ್ನಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಘಟನೆಯ ವಿಡಿಯೋ ವೈರಲ್ ಆಗಿದೆ. ಕೋಣದ ರೋಷಾವೇಶಕ್ಕೆ ಸ್ಥಳೀಯರು ಸುಸ್ತಾಗಿದ್ದಾರೆ.

ದಕ್ಷಿಣ ಕನ್ನಡ, ಜೂ.19: ಕಸಾಯಿಖಾನೆಗೆ ಒಯ್ಯುತ್ತಿದ್ದ ಕೋಣದ ಆರ್ಭಟಕ್ಕೆ ಮನೆ, ಗೇಟು, ಕಾರು ನಜ್ಜುಗುಜ್ಜಾಗಿದೆ. ಆ ಮೂಲಕ ವಧೆ ಮಾಡಲು ಬಂದವರಿಗೆ ಕೋಣವೇ ಒದೆ ಕೊಟ್ಟಿದೆ. ಇದು ಕೇರಳದ ಕಾಸರಗೋಡಿ(Kasaragod)ನಲ್ಲಿ ನಡೆದಿದೆ ಎನ್ನಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಘಟನೆಯ ವಿಡಿಯೋ ವೈರಲ್ ಆಗಿದೆ. ಇನ್ನು ಕೋಣದ ಆರ್ಭಟಕ್ಕೆ ಜನರು ಕಕ್ಕಾ ಬಿಕ್ಕಿಯಾಗಿ ಓಡಿದ್ದಾರೆ. ಕೋಣದ ರಂಪಾಟದಿಂದ ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು, ವಧೆಗಾಗಿ ಖಾಸಾಯಿಖಾನೆಗೆ
ಕೊಂಡೋಯ್ಯಲಾಗುತ್ತಿದ್ದ ಕೋಣ ಎಂಬ ಮಾಹಿತಿ ದೊರೆತಿದೆ. ಈ ವೇಳೆ ಇದ್ದಕ್ಕಿಂದಂತೆ ರಂಪಾಟ ಆರಂಭಿಸಿ ಸುತ್ತಮುತ್ತ ಇದ್ದವರನ್ನ ಎತ್ತಿ ಬಿಸಾಕಿದೆ. ಕೋಣದ ರೋಷಾವೇಶಕ್ಕೆ ಸ್ಥಳೀಯರು ಸುಸ್ತಾಗಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More