Rains cause destruction: ಚಳ್ಳಕೆರೆ ತಾಲ್ಲೂಕಿನಲ್ಲಿ ಭಾರಿ ಮಳೆ, ಮಿಡ್ಲುಗಟ್ಟೆ ಪಿಂಜಾರಹಟ್ಟಿಯ ಮನೆಗಳಿಗೆ ದೊಡ್ಡ ಪ್ರಮಾಣದ ಹಾನಿ

ಅರುಣ್​ ಕುಮಾರ್​ ಬೆಳ್ಳಿ

Updated on: Jun 09, 2023 | 10:47 AM

ಹೆಸರು ಸೂಚಿಸುವ ಹಾಗೆ ಪಿಂಜಾರ ಸಮುದಾಯದ ಜನ ಇಲ್ಲಿ ವಾಸವಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಮೊರೆಯಿಟ್ಟಿದ್ದಾರೆ.

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ ಕಳೆದ ರಾತ್ರಿ ಸುರಿದ ಗುಡುಗುಸಹಿತ ಭಾರೀ ಮಳೆ   ಕೆಲವೆಡೆ  ಅವಾಂತರಗಳನ್ನು ಸೃಷ್ಟಿಸಿದೆ. ವಿಡಿಯೋದಲ್ಲಿ ನಿಮಗೆ ಕಾಣುತ್ತಿರುವ ದೃಶ್ಯ ಮಿಡ್ಲುಗಟ್ಟೆ ಪಿಂಜಾರಹಟ್ಟಿಯದು (Midlugatte Pinjarahatti). ಇಲ್ಲಿನ 7 ಮನೆಗಳು ದೊಡ್ಡ ಪ್ರಮಾಣದಲ್ಲಿ ಹಾನಿಗೊಳಗಾಗಿವೆ (damaged). ಕೆಲವು ಮನೆಗಳ ಛಾವಣಿ (roof) ಹಾರಿಹೋಗಿ, ಮನೆಗಳಲ್ಲಿ ಮಳೆ ನೀರು ಜಮಾವಣೆಗೊಂಡಿದೆ. ಮನೆ ಅಂಟಿಕೊಂಡಂತೆ ನಿವಾಸಿಗಳು ನಿರ್ಮಿಸಿಕೊಂಡಿದ್ದ ಶೆಡ್ ಗಳು ಕುಸಿದುಬಿದ್ದಿವೆ. ಹೆಸರು ಸೂಚಿಸುವ ಹಾಗೆ ಪಿಂಜಾರ ಸಮುದಾಯದ ಜನ ಇಲ್ಲಿ ವಾಸವಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಮೊರೆಯಿಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.