ಬೆಳಗಾವಿಯಲ್ಲಿ ಗೃಹಿಣಿಯ ಹತ್ಯೆ, ಕೊಲೆಗಡುಕರ ಬಗ್ಗೆ ಸುಳಿವಿದೆ ಎನ್ನುತ್ತಾರೆ ಡಿಸಿಪಿ ನಿರಂಜನ ರಾಜೇ ಅರಸ್

ಅರುಣ್​ ಕುಮಾರ್​ ಬೆಳ್ಳಿ

Updated on: Apr 22, 2025 | 7:01 PM

ಅಂಜನಾ ಅವರ ಕೊಲೆ ನಗರದ ಗಣೇಶಪುರದಲ್ಲಿರುವ ಅಪಾರ್ಟ್​ಮೆಂಟ್ ಒಂದರಲ್ಲಿ ನಡೆದಿದೆ. ವೃತ್ತಿಯಲ್ಲಿ ಆಟೋ ಡ್ರೈವರ್ ಆಗಿರುವ ಅವರ ಪತಿ ಸಾಯಂಕಾಲ 7.30 ಕ್ಕೆ ಮನೆಗೆ ಬಂದಾಗ ಆಕೆ ಅಡುಗೆ ಮನೇಲಿ ಬಿದ್ದಿರೋದನ್ನು ನೋಡುತ್ತಾರೆ, ಸುಮಾರು 11 ಗಂಟೆಗೆ ಅವರು ಠಾಣೆಗೆ ಬಂದು ದೂರು ಕೊಟ್ಟ ಬಳಿಕ ಪೊಲೀಸರು ಇಲ್ಲಿಗೆ ಬಂದಿದ್ದಾರೆ, ಹಂತಕರ ಬಗ್ಗೆ ಸುಳಿವಿದೆ ಎಂದು ಪೊಲೀಸ್ ಅಧಿಕಾರಿ ನಿರಂಜನ್ ಹೇಳುತ್ತಾರೆ.

ಬೆಳಗಾವಿ, ಏಪ್ರಿಲ್ 22: ಬೆಳಗಾವಿಯಲ್ಲೊಬ್ಬ ಮಹಿಳೆಯ ಕೊಲೆ ನಡೆದಿದ್ದು ಹಂತಕರು ಅವರ ಮೈಮೇಲಿದ್ದ ಚಿನ್ನಾಭರಣಗಳನ್ನೂ ತೆಗೆದುಕೊಂಡು ಪರಾರಿಯಾಗಿದ್ದಾರೆ ಎಂದು ನಗರದ ಡಿಸಿಪಿ ನಿರಂಜನ ರಾಜೇ ಅರಸ್ (DCP Niranjan Raje Urs) ಹೇಳುತ್ತಾರೆ. ಘಟನೆ ನಡೆದ ಸ್ಥಳದಲ್ಲಿ ಮಾಧ್ಯಮಗಳೊಂದಿಗೆ ಮಾತಾಡಿದ ಅರಸ್, ಕೊಲೆಯಾಗಿರುವ ಮಹಿಳೆ ಹೆಸರು 53-ವರ್ಷದ ಅಂಜನಾ ದಡ್ಡೀಕರ್ ಅಗಿದ್ದು ಅವರು ಗೃಹಿಣಿಯಾಗಿದ್ದರು ಎನ್ನುತ್ತಾರೆ. ಅಂಜನಾ ಅವರನ್ನು ಕತ್ತು ಹಿಸುಕಿ ಸಾಯಿಸಲಾಗಿದೆ, ಅವರ ಮಾಂಗಲ್ಯ ಸರ, ಕಿವಿಯೋಲೆ, ಕೈ ಬೆರಳುಗಳಲ್ಲಿದ್ದ ಉಂಗುರಗಳ ಕಳ್ಳತನವಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದರು.

ಇದನ್ನೂ ಓದಿ:    ಪ್ರಿಯಕರನ ಜೊತೆ ಸೇರಿ ಜೈಪುರದ ಮಹಿಳೆಯಿಂದ ಪತಿಯ ಕೊಲೆ; ಬೈಕ್‌ನಲ್ಲಿ ಶವ ಸಾಗಿಸುವ ವಿಡಿಯೋ ವೈರಲ್

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.