AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Stampede; ನನ್ನ ಕಣ್ಣೀರು ಬಗ್ಗೆ ಯಾಕೆ ಚರ್ಚೆ? ಬೇರೆಯವರು ಕಣ್ಣೀರು ಹಾಕಿದ್ದೇನಾಯಿತು? ಶಿವಕುಮಾರ್

Bengaluru Stampede; ನನ್ನ ಕಣ್ಣೀರು ಬಗ್ಗೆ ಯಾಕೆ ಚರ್ಚೆ? ಬೇರೆಯವರು ಕಣ್ಣೀರು ಹಾಕಿದ್ದೇನಾಯಿತು? ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ
|

Updated on: Jun 06, 2025 | 6:28 PM

Share

ತಾನು ಬೆಂಗಳೂರು ನಗರ ಉಸ್ತುವಾರಿ ಸಚಿವನಾಗಿರುವುದರಿಂದ ಕೆಎಸ್​ಸಿಎ ಅಧಿಕಾರಿಗಳು ಫೋನ್ ಮಾಡಿದ್ದರು, ಆಟಗಾರರು ಅಹ್ಮದಾಬಾದ್​ನಿಂದ ಬಂದಾಗ ಅವರನ್ನು ರಿಸೀವ್ ಮಾಡಿಕೊಳ್ಳಲು ಹೋಗಿ ಕನ್ನಡದ ಧ್ವಜ ನೀಡಿದೆ ಮತ್ತು ವಿಕ್ಟರಿ ಪರೇಡ್​ಗೆ ಅನುಮತಿಯಿಲ್ಲದ ಕಾರಣ ಸಹಕರಿಸಬೇಕೆಂದು ಹೇಳಿದೆ, ಗಲಾಟೆಯಾಗುತ್ತಿರುವ ವಿಷಯ ಗೊತ್ತಾದಾಗ ಸ್ಟೇಡಿಯಂಗೆ ಹೋಗಿ ಹತ್ತು ನಿಮಿಷಗಳಲ್ಲಿ ಕಾರ್ಯಕ್ರಮ ಮುಗಿಸಲು ಹೇಳಿದೆ, ಇದರಲ್ಲಿ ತಪ್ಪೇನಿದೆ ಎಂದು ಶಿವಕುಮಾರ್ ಪ್ರಶ್ನಿಸಿದರು.

ಬೆಂಗಳೂರು, ಜೂನ್ 6: ಕಾಲ್ತುಳಿತಕ್ಕೊಳಗಾಗಿ ಸತ್ತವರ ನೆನೆದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಣ್ಣೀರು ಹಾಕಿದ್ದು ಚರ್ಚೆಯ ವಿಷಯವಾಗಿದೆ ಮತ್ತು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅದನ್ನು ಡ್ರಾಮಾ ಎಂದಿದ್ದಾರೆ. ಮಾಧ್ಯಮದವರೊಂದಿಗೆ ಮಾತಾಡಿದ ಶಿವಕುಮಾರ್, ತಾನು ಕಣ್ಣೀರು ಹಾಕಿದ್ದನ್ನು ಅಪಹಾಸ್ಯ ಮಾಡಲಾಗುತ್ತಿದೆ, ಅವರು ಸಾರ್ವಜನಿಕವಾಗಿ ಕಣ್ಣೀರು ಹಾಕಿದ್ದೇನಾಯಿತು? ಚುನಾವಣಾ ಸಮಯದಲ್ಲಿ ಯಾರು ಎಲ್ಲೆಲ್ಲಿ ಕಣ್ಣೀರು ಹಾಕಿದ್ದಾರೆ ಅಂತ ಎಲ್ಲ ದಾಖಲೆ ತನ್ನಲ್ಲಿದೆ, ಅತ್ತವರ ಕಣ್ಣೀರನ್ನು ಬಿಜೆಪಿಯವರು ಒರೆಸಿದ್ರಾ? ಕಾಲ್ತುಳಿತದ ಪ್ರಕರಣದಲ್ಲಿ ತನ್ನನ್ನು ಯಾಕೆ ದೋಷಿಯ ಸ್ಥಾನದಲ್ಲಿ ನಿಲ್ಲಿಸಲಾಗುತ್ತಿದೆ, ಘಟನೆಗೆ ತಾನು ಹೇಗೆ ಜವಾಬ್ದಾರನಾಗುತ್ತೇನೆ ಎಂದು ಶಿವಕುಮಾರ್ ಪ್ರಶ್ನಿಸಿದರು.

ಇದನ್ನೂ ಓದಿ: Bengaluru Stampede; ಡ್ರಾಮಾ ಮಾಡೋದ್ರಲ್ಲಿ ಕುಮಾರಸ್ವಾಮಿ ಎಕ್ಸ್​ಪರ್ಟ್ ಅಂತ ಜನರಿಗೆ ಗೊತ್ತಿದೆ: ಡಿಕೆ ಸುರೇಶ್

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More