ವಿಚಾರಣೆ 2 ಗಂಟೆ ಮಾತ್ರ ನಡೆಯುತ್ತದೆ ಅಂತ ಸಿದ್ದರಾಮಯ್ಯಗೆ ಮೊದಲೇ ಗೊತ್ತಾಗಿದ್ದು ಹೇಗೆ? ಆರ್ ಅಶೋಕ

ಅರುಣ್​ ಕುಮಾರ್​ ಬೆಳ್ಳಿ

Updated on: Nov 06, 2024 | 1:17 PM

ಲೋಕಾಯುಕ್ತ ಕಚೇರಿಗೆ ಮುಖ್ಯಮಂತ್ರಿಯಾದವರು ಪೊಲೀಸ್ ಅಧಿಕಾರಿಗಳನ್ನು ನೇಮಕ ಮಾಡುತ್ತಾರೆ, ತಾವೇ ನೇಮಕ ಮಾಡಿದ ಅಧಿಕಾರಿಗಳ ಎದುರು ಸಿದ್ದರಾಮಯ್ಯ ಕೈಕಟ್ಟಿ ಕೂರುವುದು ನಾಚಿಕೆಗೇಡಿನ ಸಂಗತಿ, ಸಿದ್ದರಾಮಯ್ಯ ಬದುಕಿನ ತೆರೆದ ಪುಸ್ತಕದಲ್ಲಿ ಕೇವಲ ಕಪ್ಪು ಚುಕ್ಕೆಗಳು ಮಾತ್ರ ಕಾಣುತ್ತಿವೆ ಎಂದು ಅಶೋಕ ಹೇಳಿದರು.

ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಲೋಕಾಯುಕ್ತ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಿ ವಾಪಸ್ಸಾದ ನಂತರ ನಗರದಲ್ಲಿ ಸುದ್ದಿಗೋಷ್ಠಿಯೊಂದನ್ನು ನಡೆಸಿ ಮಾತಾಡಿದ ಆರ್ ಅಶೋಕ, ಮುಖ್ಯಮಂತ್ರಿಯವರು ಲೋಕಾಯುಕ್ತ ಅಧಿಕಾರಿಗಳೊಂದಿಗೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಂತಿದೆ, ಸಿಎಂ ಅವರ ಇವತ್ತಿನ ವೇಳಾಪಟ್ಟಿಯಲ್ಲಿ 10 ಗಂಟೆಗೆ ಲೋಕಾಯುಕ್ತ ಕಚೇರಿ 12 ಗಂಟೆಗೆ ಚನ್ನಪಟ್ಟಣ ಅಂತ ಉಲ್ಲೇಖವಾಗಿದೆ. ಲೋಕಾಯುಕ್ತ ವಿಚಾರಣೆ ಎರಡು ಗಂಟೆ ಮಾತ್ರ ನಡೆಯುತ್ತದೆ ಅಂತ ಸಿಎಂಗೆ ಮೊದಲೇ ಹೇಗೆ ಗೊತ್ತಾಯಿತು? ಎಂದು ಪ್ರಶ್ನಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕಳೆದ 16 ತಿಂಗಳಲ್ಲಿ ರಾಮನಗರ ರಸ್ತೆಗಳಿಗೆ ಒಂದು ಹಿಡಿಮಣ್ಣು ಹಾಕೋದು ಶಿವಕುಮಾರ್​ಗೆ ಆಗಿಲ್ಲ: ಅಶೋಕ

Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.