Daily Devotional: ಇದನ್ನು ಮಾಡಿ, ನಿಮ್ಮ ಶನಿ ದೋಷ ಬೇಗ ನಿವಾರಣೆಯಾಗುತ್ತದೆ!

Updated on: May 16, 2026 | 6:38 AM

ಇಂದೇ ಶನೇಶ್ಚರ ಜಯಂತಿ. ಶನಿ ದೋಷ ನಿವಾರಣೆಗೆ ದಾರಿ ಏನು ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಶನಿ ದೇವನನ್ನು ನ್ಯಾಯಕಾರಕನೆಂದು ಪರಿಗಣಿಸಲಾಗುತ್ತದೆ. ನಮ್ಮ ಕರ್ಮಗಳಿಗೆ ಅನುಗುಣವಾಗಿ ಶುಭ ಅಶುಭ ಫಲಗಳನ್ನು ನೀಡುವವನು ಶನಿ. ಸಾಡೆ ಸಾತಿ, ಅರ್ಧಾಷ್ಟಮ, ಅಷ್ಟಮ, ಪಂಚಮ ಶನಿ ದೃಷ್ಟಿ ಮುಂತಾದ ಶನಿ ದೋಷಗಳಿಂದ ಬಳಲುತ್ತಿರುವವರಿಗೆ ಈ ದಿನ ಬಹಳ ಮುಖ್ಯವಾಗಿದೆ.

ಇಂದೇ ಶನೇಶ್ಚರ ಜಯಂತಿ. ಶನಿ ದೋಷ ನಿವಾರಣೆಗೆ ದಾರಿ ಏನು ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಶನಿ ದೇವನನ್ನು ನ್ಯಾಯಕಾರಕನೆಂದು ಪರಿಗಣಿಸಲಾಗುತ್ತದೆ. ನಮ್ಮ ಕರ್ಮಗಳಿಗೆ ಅನುಗುಣವಾಗಿ ಶುಭ ಅಶುಭ ಫಲಗಳನ್ನು ನೀಡುವವನು ಶನಿ. ಸಾಡೆ ಸಾತಿ, ಅರ್ಧಾಷ್ಟಮ, ಅಷ್ಟಮ, ಪಂಚಮ ಶನಿ ದೃಷ್ಟಿ ಮುಂತಾದ ಶನಿ ದೋಷಗಳಿಂದ ಬಳಲುತ್ತಿರುವವರಿಗೆ ಈ ದಿನ ಬಹಳ ಮುಖ್ಯವಾಗಿದೆ.

ಈ ಅಮಾವಾಸ್ಯೆಯಂದು ಶನಿ ದೋಷ ನಿವಾರಣೆಗಾಗಿ ಉಪವಾಸ, ಧ್ಯಾನ, ಪೂಜೆ ಹಾಗೂ ದಾನ ಮಾಡುವುದು ಅತ್ಯಂತ ಶುಭ. ಸಾಸಿವೆ ಎಣ್ಣೆ, ಎಳ್ಳೆಣ್ಣೆ, ಎಳ್ಳಿನ ಬತ್ತಿ ದೀಪಗಳನ್ನು ಹಚ್ಚುವುದು, ಶನಿ ಅಷ್ಟೋತ್ತರ ಪಠಿಸುವುದು, ಶನಿಗೆ ವಸ್ತ್ರ ಮತ್ತು ನೈವೇದ್ಯ ಅರ್ಪಿಸುವುದು ಉತ್ತಮ. ಹನುಮಾನ್ ಮತ್ತು ವೆಂಕಟೇಶ್ವರ ಸ್ವಾಮಿ ದೇಗುಲಗಳಿಗೆ ಭೇಟಿ ನೀಡುವುದೂ ಸಹ ಶನಿದೋಷ ನಿವಾರಣೆಗೆ ಸಹಕಾರಿ. ಪ್ರತಿಯೊಬ್ಬರೂ ಭಕ್ತಿಯಿಂದ ಆಚರಿಸುವುದರಿಂದ ಶನಿ ದೇವರ ಕೃಪೆಗೆ ಪಾತ್ರರಾಗಿ ಜೀವನದಲ್ಲಿ ಎದುರಾಗುವ ಕಷ್ಟಗಳಿಂದ ಮುಕ್ತಿ ಪಡೆಯಬಹುದು ಎಂದು ಗುರೂಜಿ ವಿವರಿಸಿದ್ದಾರೆ.

 

Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More