ಬಿದಿರು ಕಳಲೆ ಸಾಂಬಾರ್; ವರ್ಷಕ್ಕೆ ಒಮ್ಮೆಯಾದರೂ ಮಾಡಿ ಸವಿಯಿರಿ

ಆರೋಗ್ಯಕರವಾದ ಅಡುಗೆ ಇಷ್ಟಪಡುವವರಿಗಾಗಿ ಇಂದು ನಾವು ಬಿದಿರು ಕಳಲೆ ಸಾಂಬಾರ್ ಮಾಡುವುದು ಹೇಗೆ ಎಂದು ತಿಳಿದುಕೊಳ್ಳೋಣ.

ಬಿದಿರು ಕಳಲೆ ಸಾಂಬಾರ್; ವರ್ಷಕ್ಕೆ ಒಮ್ಮೆಯಾದರೂ ಮಾಡಿ ಸವಿಯಿರಿ
| Updated By: preethi shettigar

Updated on:Sep 01, 2021 | 11:06 AM

ಕಾಲಕ್ಕೆ ವಿಶೇಷವಾದ ಒಂದಷ್ಟು ರೆಸಿಪಿಗಳನ್ನು ತಿಳಿದುಕೊಳ್ಳುವುದು ಮುಖ್ಯ ಎನಿಸಿಕೊಳ್ಳುತ್ತದೆ. ಏಕೆಂದರೆ ರುಚಿಕರವಾದ ಅಡುಗೆಯನ್ನು( Cooking) ಮಾಡುವುದರ ಜೊತೆಗೆ ಹೊಸತೆನೋ ಒಂದನ್ನು ಪ್ರತಿದಿನವು ಪ್ರಯೋಗ ಮಾಡುವುದು ಭೋಜನ ಪ್ರೀಯರಿಗೆ ಹೆಚ್ಚು ಖುಷಿಯನ್ನು ಕೊಡುವ ವಿಚಾರ. ಹಾಗೆಯೇ ಸಿಹಿಯಾದ ಅಡುಗೆಯನ್ನು ಇಷ್ಟಪಡುವವರು ಇರುತ್ತಾರೆ. ಅಂತೆಯೇ ಕಾರ ಇಷ್ಟಪಡುವವರು ಇರುತ್ತಾರೆ. ಇನ್ನು ಆರೋಗ್ಯಕರವಾದ ಅಡುಗೆ ಇಷ್ಟಪಡುವವರು ಇರುತ್ತಾರೆ. ಹೀಗಾಗಿ ಇಂದು ನಾವು ಬಿದಿರು ಕಳಲೆ ಸಾಂಬಾರ್ ಮಾಡುವುದು ಹೇಗೆ ಎಂದು ತಿಳಿದುಕೊಳ್ಳೋಣ.

ಬಿದಿರು ಕಳಲೆ ಸಾಂಬಾರ್ ಮಾಡಲು ಬೇಕಾಗುವ ಸಾಮಾಗ್ರಿಗಳು ಸಾಸಿವೆ, ಕರಿಬೇವು, ಅಡುಗೆ ಎಣ್ಣೆ, ಬಿದಿರು ಕಳಲೆ, ಗೋರೆ ಕಾಯಿ, ಬದನೆಕಾಯಿ, ಕೋಸು, ಹುರುಳಿ ಕಾಯಿ, ಈರುಳ್ಳಿ, ಟೊಮೆಟೋ, ನುಗ್ಗೆಕಾಯಿ, ಮೂಲಂಗಿ, ಆಲೂಗಡ್ಡೆ, ಸೀಮೆ ಬದನೆಕಾಯಿ, ಕ್ಯಾರೆಟ್, ಹರವೆ ಸೊಪ್ಪು, ಮೆಂತೆ ಸೊಪ್ಪು, ಸಬ್ಬಸಿಗೆ ಸೊಪ್ಪು, ನುಗ್ಗೆ ಸೊಪ್ಪು, ಬಟಾಣಿ, ಹೆಸರು ಕಾಳು, ಅವರೆ ಕಾಳು, ಮಡಕೆ ಕಾಳು, ಹುರುಳಿ ಕಾಳು, ಬೆಳ್ಳುಳ್ಳಿ, ಬ್ಯಾಡಗಿ ಮೆಣಸಿನಕಾಯಿ, ಕಾಯಿ ತುರಿ, ಕೊತ್ತಂಬರಿ ಸೊಪ್ಪು.

ಬಿದಿರು ಕಳಲೆ ಸಾಂಬಾರ್ ಮಾಡುವ ವಿಧಾನ
ಹುರಿದ ಬ್ಯಾಡಗಿ ಮೆಣಸಿನಕಾಯಿ, ಕರಿ ಮೆಣಸು, ಬೆಳ್ಳುಳ್ಳಿ, ಕಾಯಿ ತುರಿ, ಕೊತ್ತಂಬರಿ ಸೊಪ್ಪು ಹಾಕಿ ಚೆನ್ನಾಗಿ ರುಬ್ಬಿಕೊಳ್ಳಿ. ಬಳಿಕ ಒಂದು ಕುಕ್ಕರ್​ಗೆ ಬಿದಿರು ಕಳಲೆ, ಗೋರೆ ಕಾಯಿ, ಬದನೆಕಾಯಿ, ಕೋಸು, ಹುರುಳಿ ಕಾಯಿ, ಈರುಳ್ಳಿ, ಟೊಮೆಟೋ, ನುಗ್ಗೆಕಾಯಿ, ಮೂಲಂಗಿ, ಆಲೂಗಡ್ಡೆ, ಸೀಮೆ ಬದನೆಕಾಯಿ, ಕ್ಯಾರೆಟ್, ಹರವೆ ಸೊಪ್ಪು, ಮೆಂತೆ ಸೊಪ್ಪು, ಸಬ್ಬಸಿಗೆ ಸೊಪ್ಪು, ನುಗ್ಗೆ ಸೊಪ್ಪು, ಬಟಾಣಿ, ಹೆಸರು ಕಾಳು, ಅವರೆ ಕಾಳು, ಮಡಕೆ ಕಾಳು, ಹುರುಳಿ ಕಾಳು, ಉಪ್ಪು ಹಾಕಿ ಬೇಯಿಸಿ. ಬಳಿಕ ಬೇಯಿಸಿದ ತರಕಾರಿಯನ್ನು ಒಂದು ಪಾತ್ರೆಗೆ ಹಾಕಿ, ರುಬ್ಬಿದ ಮಸಾಲೆ ಹಾಕಿ. ನಂತರ ಸಾಸಿವೆ, ಕರಿಬೇವು ಹಾಕಿ ಒಗ್ಗರಣೆ ಹಾಕಿದರೆ ಬಿದಿರು ಕಳಲೆ ಸಾಂಬಾರ್ ಸವಿಯಲು ಸಿದ್ಧ.

ಇದನ್ನೂ ಓದಿ:
ಗಾರ್ಲಿಕ್ ಚೀಸ್​ಕಾರ್ನ್​ ಸ್ಯಾಂಡ್ವಿಚ್; ಮನೆಯಲ್ಲಿ ಇಂದೇ ಮಾಡಿ ಸವಿಯಿರಿ

ಉತ್ತರ ಕರ್ನಾಟಕ ಸ್ಪೆಷಲ್ ಮೆಂತೆ ಸೊಪ್ಪು ಕಡಬು; ಸರಳ ವಿಧಾನದಲ್ಲಿ ಮಾಡಿ ಸವಿಯಿರಿ

Published On - 8:53 am, Wed, 1 September 21

Follow us
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?