AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಕಾಂಗ್ರೆಸ್ ಸೋತರೆ ತೆಲಂಗಾಣದ ಕೆ ಚಂದ್ರಶೇಖರ್ ರಾವ್ ಅವರಿಗಾಗುವ ಲಾಭವೇನು? ಹೆಚ್ ಡಿ ಕುಮಾರಸ್ವಾಮಿ

ಕರ್ನಾಟಕದಲ್ಲಿ ಕಾಂಗ್ರೆಸ್ ಸೋತರೆ ತೆಲಂಗಾಣದ ಕೆ ಚಂದ್ರಶೇಖರ್ ರಾವ್ ಅವರಿಗಾಗುವ ಲಾಭವೇನು? ಹೆಚ್ ಡಿ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ| Edited By: |

Updated on:Jan 20, 2023 | 5:36 PM

Share

ಜಮೀರ್ ಯಾಕೆ ಹೈದರಾಬಾದ್ ಗೆ ಹೋಗಿದ್ದರೆನ್ನುವುದು ತಮಗೆ ಗೊತ್ತಿಲ್ಲ, ಅವರನ್ನೇ ಕೇಳಿ ತಿಳಿದುಕೊಳ್ಳಿ ಅಂತ ಕುಮಾರಸ್ವಾಮಿ ಹೇಳಿದರು.

ವಿಜಯಪುರ:  ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ತೆಲಂಗಾಣದ ಮುಖ್ಯಮಂತ್ರಿ ಮತ್ತು ತೆಲಂಗಾಣ ರಾಷ್ಟ್ರ ಸಮಿತಿ ಅಧ್ಯಕ್ಷ ಕೆ ಚಂದ್ರಶೇಖರ್ ರಾವ್ (K Chandrashekar Rao) ಅವರು 500 ಕೋಟಿ ರೂ. ಗಳನ್ನು ನೀಡಿದ್ದಾರೆ ಮತ್ತು ಅದೇ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ (Zameer Ahmed) ಅವರು ಹೈದರಾಬಾದ್ ಗೆ ಹೋಗಿ ಚಂದ್ರಶೇಖರ್ ಅವರನ್ನು ಭೇಟಿಯಾಗಿರುವ ವದಂತಿಗಳ ಬಗ್ಗೆ ಜೆಡಿ(ಎಸ್) ನಾಯಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಗೊಂದಲ, ಸಂದೇಹಗಳನ್ನು ವ್ಯಕ್ತಪಡಿಸಿದರು. ಕೆಸಿಆರ್ ಯಾರಿಗೆ ಹಣ ಕೊಟ್ಟಿದ್ದಾರೆ, ಕರ್ನಾಟಕದಲ್ಲಿ ಕಾಂಗ್ರೆಸ್ ಸೋತರೆ ಅವರಿಗೆ ಆಗುವ ಲಾಭವೇನು? ಅವರ ಹೋರಾಟ ಬಿಜೆಪಿಯೊಂದಿಗಿದೆ ಕಾಂಗ್ರೆಸ್ ನೊಂದಿಗೆ ಅಲ್ಲ, ಎಂದು ಕುಮಾರಸ್ವಾಮಿ ಹೇಳಿದರು. ಜಮೀರ್ ಯಾಕೆ ಹೈದರಾಬಾದ್ ಗೆ ಹೋಗಿದ್ದರೆನ್ನುವುದು ತಮಗೆ ಗೊತ್ತಿಲ್ಲ, ಅವರನ್ನೇ ಕೇಳಿ ತಿಳಿದುಕೊಳ್ಳಿ ಅಂತ ಕುಮಾರಸ್ವಾಮಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published on: Jan 20, 2023 05:03 PM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.