Assembly Polls: ಹೆಚ್ ಡಿ ರೇವಣ್ಣರ ಮನೆಗೆ ಭೇಟಿ ನೀಡಿ ಹಾಸನ ಟಿಕೆಟ್ ಆಕಾಂಕ್ಷಿ ಸ್ವರೂಪ್ ಅಚ್ಚರಿಯ ಭೇಟಿ!

ಅರುಣ್​ ಕುಮಾರ್​ ಬೆಳ್ಳಿ

Updated on: Mar 08, 2023 | 4:05 PM

ಮಾಧ್ಯಮ ಪ್ರತಿನಿಧಿಗಳೊಂದಿಗೆ ವಾಪಸ್ಸು ಹೋಗುವಾಗ ಮಾತಾಡಿದ ಸ್ವರೂಪ್, ಮಾಜಿ ಸಚಿವರನ್ನು ಸೌಜನ್ಯತೆಗಾಗಿ ಭೇಟಿಯಾಗಿದ್ದು, ಬಹಳ ದಿನಗಳಿಂದ ಅವರನ್ನು ಭೇಟಿಯಾಗಿರಲಿಲ್ಲ ಎಂದು ಹೇಳಿದರು.

ಹಾಸನ: ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಯಾರಿಗೆ ಅಂತ ಇನ್ನೂ ಖಚಿತವಾಗಿಲ್ಲ. ಒಂದು ತಿಂಗಳಿಂದ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಇನ್ನೆರಡು ದಿನಗಳಲ್ಲಿ ಹೇಳ್ತೀನಿ ಅಂತಿದ್ದಾರೆ. ಭವಾನಿ ರೇವಣ್ಣ (Bhavani Revanna) ಟಿಕೆಟ್ ಪಡೆದೇ ತೀರುವ ಹಟಕ್ಕೆ ಬಿದ್ದಿದ್ದಾರೆ. ಆದರೆ ಟಿಕೆಟ್ ಆಕಾಂಕ್ಷಿಯಾಗಿರುವ ಸ್ವರೂಪ್ (HP Swaroop)ತಮ್ಮ ಪ್ರಯತ್ನ ನಿಲ್ಲಿಸಿಲ್ಲ. ಇದೇ ಹಿನ್ನೆಲೆಯಲ್ಲಿ ಸ್ವರೂಪ್ ಇಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ (HD Revanna) ಮನೆಗೆ ಭೇಟಿ ನೀಡಿ ಅಚ್ಚರಿ ಹುಟ್ಟಿಸಿದರು. ವಾಪಸ್ಸು ಹೋಗುವಾಗ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸ್ವರೂಪ್ ಮಾಜಿ ಸಚಿವರನ್ನು ಸೌಜನ್ಯತೆಗಾಗಿ ಭೇಟಿಯಾಗಿದ್ದು, ಬಹಳ ದಿನಗಳಿಂದ ಅವರನ್ನು ಭೇಟಿಯಾಗಿರಲಿಲ್ಲ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 08, 2023 04:05 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.