ಗುಂಡುಹಾರಿಸಿ ಕುಖ್ಯಾತ ಅಂತರರಾಜ್ಯ ಕಳ್ಳರ ಗ್ಯಾಂಗ್ ಬಂಧಿಸಿದ ಹುಬ್ಬಳ್ಳಿ-ಧಾರವಾಡ ಪೊಲೀಸರು

ಅರುಣ್​ ಕುಮಾರ್​ ಬೆಳ್ಳಿ

Updated on: Mar 15, 2025 | 12:17 PM

ಪೊಲೀಸರು ಬಂಧಿಸಿರುವ ಕಳ್ಳರು ಉತ್ತರ ಪ್ರದೇಶದ ಘಾಜಿಯಾಬಾದ್ ಮತ್ತು ಬುಲಂದ್​ಶಹರ ಮೂಲದವರೆಂದು ಪೊಲೀಸ್ ಅಧಿಕಾರಿ ಹೇಳುತ್ತಾರೆ. ಮಧ್ಯಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಕರ್ನಾಟಕ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಕಳ್ಳರ ಗುಂಪಿನ ಮೇಲೆ ಪ್ರಕರಣಗಳು ದಾಖಲಾಗಿವೆ. ಗುಂಪಿನ ಸದಸ್ಯರು ಪ್ರತಿಷ್ಠಿತ ಮನೆತನಕ್ಕೆ ಸೇರಿದ ಜನರ ಹಾಗೆ ಬಟ್ಟೆ ಧರಿಸುತ್ತಾರಂತೆ.

ಹುಬ್ಬಳ್ಳಿ, 15 ಮಾರ್ಚ್: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಅವರ ಮನೆ ಹಿಂಭಾಗದಲ್ಲಿ ಇದೇ ತಿಂಗಳ ಒಂದನೇ ತಾರೀಖು ಭಾರೀ ಮೊತ್ತದ ಹಣವನ್ನು ಕಳ್ಳತನ ಮಾಡಿದ್ದ ಅಂತರರಾಜ್ಯ ಖದೀಮರ ಗ್ಯಾಂಗೊಂದರ ಸದಸ್ಯರಾಗಿರುವ ಇರ್ಶಾದ್ ಖುರೇಶಿ ಮತ್ತು ಅಕ್ಬರ್ ಖುರೇಶೀ ಹೆಸರಿನ ಇಬ್ಬರ ಮೇಲೆ ಹುಬ್ಬಳ್ಳಿ-ಧಾರವಾಡ ಪೊಲೀಸರು ಗೋಲಿಬಾರ್ ಮಾಡಿ ವಶಕ್ಕೆ ಪಡೆದಿದ್ದಾರೆ. ತಪ್ಪಿಸಿಕೊಂಡಿದ್ದ ಮೂರನೇ ಕಳ್ಳ ಶಂಶೇರ್ ನನ್ನೂ ಬಂಧಿಸಲಾಗಿದೆ. ಕಳ್ಳರ ಮೇಲೆ 8 ರೌಂಡ್ ಗುಂಡು ಹಾರಿಸಿ ಬಂಧಿಸಿದ ಸ್ಥಳದಲ್ಲಿ ನಮ್ಮ ವರದಿಗಾರ ಪೊಲೀಸ್ ಕಮೀಶನರ್ ಎನ್ ಶಶಿಕುಮಾರ್ ಅವರೊಂದಿಗೆ ಮಾತಾಡಿದ್ದು ಅವರು ಹೇಳುವ ಪ್ರಕಾರ ಕಳ್ಳರು ತಮಗೆ ಸೇರಿರುವ ಕಾರನ್ನೆ ಸುಟ್ಟಿರುವ ಸಾಧ್ಯತೆ ಇದೆ, ಕಾರಿನ ರಿಜಿಸ್ಟ್ರೇಶನ್ ಮೂಲಕ ಅದರ ಮಾಲೀಕನನ್ನು ತಲುಪುವುದು ಸುಲಭ ಎಂಬ ಕಾರಣಕ್ಕೆ ಕಾರನ್ನು ಸುಟ್ಟಿರುತ್ತಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ರೌಡಿಶೀಟರ್​ನೊಬ್ಬ ತಲೆಮೇಲೆ ಕ್ಯಾಪ್ ಧರಿಸಿದ್ದನ್ನು ಕಂಡು ಕೋಪಗೊಂಡ ಹು-ಧಾ ಪೊಲೀಸ್ ಕಮೀಶನರ್ ಶಶಿಕುಮಾರ್ 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.