ಹುಬ್ಬಳ್ಳಿ, ಆಗಸ್ಟ್ 07: ದಶಕಗಳ ಹೋರಾಟದ ಫಲವಾಗಿ ಹುಬ್ಬಳ್ಳಿಯ ಚೆನ್ನಮ್ಮ ಮೈದಾನ (ಈದ್ಗಾ ಮೈದಾನ)ದಲ್ಲಿ ಗಣೇಶ (Hubballi Idgah Maidan Ganesh) ಪ್ರತಿಷ್ಠಾಪಿಸಲು ಅನುಮತಿ ನೀಡಲಾಗಿದೆ. ಕಳೆದ ಎರಡು ವರ್ಷಗಳಿಂದ ಗಣೇಶ ಪ್ರತಿಷ್ಠಾಪಿಸಲಾಗುತ್ತಿದೆ. ಈ ವರ್ಷವೂ ಚೆನ್ನಮ್ಮ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪಿಸಲಾಗಿದೆ. ಈ ವರ್ಷ ವಿಶೇಷವಾಗಿ ಶ್ರೀರಾಮನ ಅವತಾರದ ಗಣೇಶ ವಿಗ್ರಹವನ್ನು ಪ್ರತಿಷ್ಠಾಪಿಸಲಾಗಿದೆ. ಗಣೇಶ ಪ್ರತಿಷ್ಠಾಪನೆಗೂ ಮುನ್ನ ಮೂರುಸಾವಿರ ಮಠದಿಂದ ಚೆನ್ನಮ್ಮ ಮೈದಾನದವರಗೆ ಭವ್ಯ ಮೆರವಣಿಗೆ ನಡೆಯಿತು. ಡಿಜೆ, ವಿವಿಧ ವಾದ್ಯಮೇಳಗಳಿಗೆ ಜನರು ಕುಣಿದು ಕುಪ್ಪಳಿಸಿದರು.
ಚೆನ್ನಮ್ಮ ಮೈದಾನ ಗಣೇಶ ಮೆರವಣಿಗೆ ಉದ್ದಕ್ಕೂ ಪೊಲೀಸ್ ಭದ್ರತೆ ಇತ್ತು. ಚೆನ್ನಮ್ಮ ಮೈದಾನದ ಸುತ್ತಮುತ್ತ ಪೊಲೀಸ್, ಅರೆಸೇನೆಯನ್ನು ನಿಯೋಜಿಸಲಾಗಿದೆ. ಮೈದಾನದ ಸುತ್ತ ಸಿಸಿ ಕ್ಯಾಮರಾ ಅಳವಡಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ