ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್ ಭರಿಸಲಾಗದೆ ವಿವೇಕಾನಂದ ಕುಟುಂಬ ಕಂಗಾಲು
ಹುಬ್ಬಳ್ಳಿಯ ಮಾನ್ಯಾ ಘಟನೆ ಸಂಬಂಧ, ಆಕೆಯ ಕುಟುಂಬದ ಆಸ್ಪತ್ರೆ ಬಿಲ್ ಪಾವತಿಸದ ಜಿಲ್ಲಾಡಳಿತದ ವಿರುದ್ಧ ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಸಿ ಸೇರಿದಂತೆ ಅಧಿಕಾರಿಗಳು ಕುಟುಂಬಕ್ಕೆ ನೆರವು ನೀಡುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆಂದು ಆರೋಪಿಸಿ, ಸರ್ಕಾರವೇ ಆಸ್ಪತ್ರೆ ಬಿಲ್ ಭರಿಸಬೇಕು ಎಂದು ಆಗ್ರಹಿಸಿದ್ದಾರೆ.
ಹುಬ್ಬಳ್ಳಿ, ಡಿಸೆಂಬರ್ 23: ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದಕ್ಕೆ ತಂದೆಯಿಂದಲೇ ಮಗಳ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದು 2 ದಿನ ಕಳೆದರೂ ಸರ್ಕಾರ ಸ್ಪಂದಿಸಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತದ ವಿರುದ್ಧ ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಕುಟುಂಬ ಸದಸ್ಯರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಸಂತ್ರಸ್ತ ಕುಟುಂಬವು ಆಸ್ಪತ್ರೆ ಬಿಲ್ ಪಾವತಿಸಲು ಪರದಾಡುವಂತ್ತಾಗಿದೆ. ಡಿಸಿ ಸೇರಿದಂತೆ ಅಧಿಕಾರಿಗಳು ಕುಟುಂಬಕ್ಕೆ ನೆರವು ನೀಡುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆಂದು ಆರೋಪ ಕೇಳಿಬಂದಿದೆ. ಸರ್ಕಾರವೇ ಆಸ್ಪತ್ರೆ ಬಿಲ್ ಭರಿಸಬೇಕು ಎಂದು ಆಗ್ರಹಿಸಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್ನ್ಯೂಸ್: ವಿಡಿಯೋ ನೋಡಿ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
