ಐಷಾರಾಮಿ ಕಾರಿನಲ್ಲಿ ಬಂದ್ರು, ಬೀದಿಯಲ್ಲಿದ್ದ ಹಸುವನ್ನೇ ಕದ್ದುಕೊಂಡು ಹೋದ್ರು!

Edited By:

Updated on: May 05, 2026 | 2:55 PM

ನಗರದಲ್ಲಿ ಐಷಾರಾಮಿ ಕಾರುಗಳಲ್ಲಿ ಬಂದು ರಸ್ತೆ ಬದಿಯ ಜಾನುವಾರುಗಳನ್ನು ಕಳ್ಳತನ ಮಾಡುತ್ತಿದ್ದ ಶಿವಮೊಗ್ಗ ಮೂಲದ ಮುಬಾರಕ್ ಮತ್ತು ಆತನ ಇಬ್ಬರು ಸ್ನೇಹಿತರನ್ನು ಬೆಂಡಿಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಗ್ಯಾಂಗ್ ಬೇರೆ ಬೇರೆ ಜಿಲ್ಲೆಗಳಿಂದ ಐಷಾರಾಮಿ ಕಾರುಗಳನ್ನು ತಂದು, ಅವುಗಳಿಗೆ ಕಪ್ಪು ಬಣ್ಣದ ಸ್ಟಿಕ್ಕರ್ ಅಂಟಿಸಿ ಗುರುತು ಸಿಗದಂತೆ ಸಂಚರಿಸುತ್ತಿದ್ದರು. ಹುಬ್ಬಳ್ಳಿಯ ಸೆಟಲ್‌ಮೆಂಟ್ ಹಾಗೂ ಹಳೇ ಹುಬ್ಬಳ್ಳಿ ಭಾಗದಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದ ಜಾನುವಾರುಗಳನ್ನು ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ದೃಶ್ಯಗಳನ್ನೇ ಆಧಾರವಾಗಿಟ್ಟುಕೊಂಡು ಕಾರ್ಯಾಚರಣೆ ನಡೆಸಿದ ಪೊಲೀಸರು, ಆರೋಪಿಗಳಿಗೆ ಹೆಡೆಮುರಿ ಕಟ್ಟಿದ್ದಾರೆ.

ಹುಬ್ಬಳ್ಳಿ, ಮೇ 05: ನಗರದಲ್ಲಿ ಐಷಾರಾಮಿ ಕಾರುಗಳಲ್ಲಿ ಬಂದು ರಸ್ತೆ ಬದಿಯ ಜಾನುವಾರುಗಳನ್ನು ಕಳ್ಳತನ ಮಾಡುತ್ತಿದ್ದ ಶಿವಮೊಗ್ಗ ಮೂಲದ ಮುಬಾರಕ್ ಮತ್ತು ಆತನ ಇಬ್ಬರು ಸ್ನೇಹಿತರನ್ನು ಬೆಂಡಿಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಗ್ಯಾಂಗ್ ಬೇರೆ ಬೇರೆ ಜಿಲ್ಲೆಗಳಿಂದ ಐಷಾರಾಮಿ ಕಾರುಗಳನ್ನು ತಂದು, ಅವುಗಳಿಗೆ ಕಪ್ಪು ಬಣ್ಣದ ಸ್ಟಿಕ್ಕರ್ ಅಂಟಿಸಿ ಗುರುತು ಸಿಗದಂತೆ ಸಂಚರಿಸುತ್ತಿದ್ದರು. ಹುಬ್ಬಳ್ಳಿಯ ಸೆಟಲ್‌ಮೆಂಟ್ ಹಾಗೂ ಹಳೇ ಹುಬ್ಬಳ್ಳಿ ಭಾಗದಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದ ಜಾನುವಾರುಗಳನ್ನು ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ದೃಶ್ಯಗಳನ್ನೇ ಆಧಾರವಾಗಿಟ್ಟುಕೊಂಡು ಕಾರ್ಯಾಚರಣೆ ನಡೆಸಿದ ಪೊಲೀಸರು, ಆರೋಪಿಗಳಿಗೆ ಹೆಡೆಮುರಿ ಕಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More