Hubballi: 8 ಲಕ್ಷ ರೂ. ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್​ ವಾಪಸ್ ನೀಡಿ ಮಾನವೀಯತೆ ಮೆರೆದ ಆಟೋ ಚಾಲಕ

Edited By:

Updated on: Apr 18, 2024 | 9:43 AM

ಮಹಿಳೆ ಪ್ರಯಾಣಿಕರೊಬ್ಬರು ಆಟೋದಲ್ಲಿ ಬಿಟ್ಟುಹೋದ 8 ಲಕ್ಷ ರೂ. ಮೌಲ್ಯದ ಬಂಗಾರ ಮತ್ತು ಬೆಳ್ಳಿ ಇದ್ದ ಬ್ಯಾಗ್​ ಅನ್ನು ಆಟೋ ಚಾಲಕ ಪೊಲೀಸರು, ಆಟೋ ಚಾಲಕರ ಸಮ್ಮುಖದಲ್ಲಿ ವಾಪಸ್​ ನೀಡುವ ಮೂಲಕ ಮಾನವೀಯತೆ ಮೆರೆದಿರುವಂತಹ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಸದ್ಯ ನಾಗರಾಜ್ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದ್ದು, ಆಟೋ ಚಾಲಕನ ಮಾನವೀಯತೆಗೆ ಪೊಲೀಸರು ಕೂಡ ಸನ್ಮಾನ ಮಾಡಿದ್ದಾರೆ. 

ಹುಬ್ಬಳ್ಳಿ, ಏಪ್ರಿಲ್​​ 18: 8 ಲಕ್ಷ ರೂ. ಮೌಲ್ಯದ ಬಂಗಾರ ಮತ್ತು ಬೆಳ್ಳಿಯನ್ನು ವಾಪಸ್ ನೀಡುವ ಮೂಲಕ ಆಟೋ ಚಾಲಕರೊಬ್ಬರು (auto driver) ಮಾನವೀಯತೆ (humanity) ಮೆರೆದಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಹುಬ್ಬಳ್ಳಿಯ ನಾಗರಾಜ್​ ಎನ್ನುವವರ ಆಟೋದಲ್ಲಿ ನಗರದ ಗೋಕುಲ ಬಸ್ ನಿಲ್ದಾಣದಿಂದ ಹೊಸುರ ಬಸ್ ನಿಲ್ದಾಣದವರೆಗೆ ಮೂವರು ಪ್ರಯಾಣ ಮಾಡಿದ್ದಾರೆ. ಈ ವೇಳೆ ಆಟೋದಿಂದ ಇಳಿಯುವಾಗ ಗಡಿಬಿಡಿಯಲ್ಲಿ ಧಾರವಾಡದ ನಿಸ್ಸಾಮುದ್ದೀನ್ ಕಾಲೋನಿ ಮಹಿಳೆಯೊಬ್ಬರು ತಮ್ಮ ಬ್ಯಾಗ್​ನ್ನು​​ ಆಟೋದಲ್ಲಿ ಬಿಟ್ಟು ಹೋಗಿದ್ದಾರೆ. ಹೀಗೆ ಪ್ರಯಾಣಿಕರು ಬಿಟ್ಟು ಹೋದ ಬ್ಯಾಗ್​ನಲ್ಲಿ 4 ತೊಲೆ ಬಂಗಾರ, 16 ತೊಲೆ ಬೆಳ್ಳಿ ಹಾಗೂ ಮನೆಯ ದಾಖಲಾತಿಗಳು ಇವೆ. ಪ್ರಯಾಣಿಕರು ಬ್ಯಾಗ್​ ಬಿಟ್ಟು ಹೋಗಿರುವುದನ್ನು ಗಮನಿಸಿದ ಆಟೋ ಚಾಲಕ ಹುಬ್ಬಳ್ಳಿಯ ಗೋಕುಲ ಠಾಣೆಯ‌ ಪೊಲೀಸರು, ಆಟೋ ಚಾಲಕರ ಸಮ್ಮುಖದಲ್ಲಿ ಪ್ರಯಾಣಿಕರಿಗೆ ಬ್ಯಾಗ್​ ವಾಪಸ್ ನೀಡಿದ್ದಾರೆ. ಆ ಮೂಲಕ ಆಟೋ ಚಾಲಕ ನಾಗರಾಜ್ ಮಾನವೀಯತೆ ಮೆರೆದಿದ್ದಾರೆ.​ ಸದ್ಯ ನಾಗರಾಜ್ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದ್ದು, ಆಟೋ ಚಾಲಕನ ಮಾನವೀಯತೆಗೆ ಪೊಲೀಸರು ಕೂಡ ಸನ್ಮಾನ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.  

Published on: Apr 18, 2024 09:42 AM
Follow Us
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More